28 C
Mumbai
March 14, 2026
Mumbai News Kannada
ಪ್ರಕಟಣೆ

ವಿದ್ಯಾವಿಹಾರ್ ದೇವಸ್ಥಾನದಲ್ಲಿ ನಾಳೆ (ಮಾರ್ಚ್ 15) ‘ಶ್ರೀ ರಾಮ ವನಗಮನ’ ತಾಳಮದ್ದಳೆ: ಇಬ್ಬರು ಹಿರಿಯ ಕಲಾವಿದರಿಗೆ ಸನ್ಮಾನ





ಮುಂಬಯಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ಮತ್ತು ಮುಂಬಯಿ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ 24 ಕಂತುಗಳ ‘ಶ್ರೀ ರಾಮ ಕಥಾ ಹೃದಯಂ’ ತಾಳಮದ್ದಳೆ ಸರಣಿಯ ಮೂರನೇ ಪ್ರಸ್ತುತಿಯು ನಾಳೆ ನಡೆಯಲಿದೆ.

​ದಿನಾಂಕ ಮಾರ್ಚ್ 15ರ ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ, ವಿದ್ಯಾವಿಹಾರ್ (ಪಶ್ಚಿಮ) ಗಾಮ್‌ದೇವಿ ಮಾರ್ಗದ ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ದೇವಸ್ಥಾನದಲ್ಲಿ ‘ಶ್ರೀ ರಾಮ ವನಗಮನ’ ಪ್ರಸಂಗದ ತಾಳಮದ್ದಳೆ ಆಯೋಜಿತವಾಗಿದೆ.

​ಪ್ರಭು ರಾಮಚಂದ್ರನ ಅವತಾರದಿಂದ ನಿರ್ಯಾಣದವರೆಗಿನ ಸಂಪೂರ್ಣ ರಾಮ ಚರಿತ್ರೆಯನ್ನು ಪುಣ್ಯಪ್ರದವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಸರಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಭಾಗವಾಗಿ, ಮುಂಬಯಿ ಯಕ್ಷಗಾನ ಕ್ಷೇತ್ರದಲ್ಲಿ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಇಬ್ಬರು ಹಿರಿಯ ಕಲಾವಿದರನ್ನು ಅಂದು ವಿಶೇಷವಾಗಿ ಗೌರವಿಸಲಾಗುವುದು.

​ವೇದಮೂರ್ತಿ ಪೆರ್ಣಂಕಿಲ ಶ್ರೀ ಹರಿದಾಸ ಭಟ್ ಅವರ ಆಶಯದಂತೆ, ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಮತ್ತು ಭಕ್ತಾದಿಗಳು ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ

Mumbai News Desk

   ನ. 19 ;   ಕುಲಾಲ ಸಂಘ ಮುಂಬಯಿ  93ನೇ ವಾರ್ಷಿಕ ಮಹಾಸಭೆ.

Mumbai News Desk

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.

Mumbai News Desk

ತೋಡಾರು ಕೊಡಮಣಿತ್ತಾಯ ದೈವಸ್ಥಾನ, ಬ್ರಹ್ಮಶ್ರೀ ಬೈದರ್ಕಳ ಗರಡಿ : ಡಿ 22ರಿಂದ 26ವರೆಗೆ ಕಾಲಾವಧಿ ಜಾತ್ರೆ

Mumbai News Desk

ತುಳುಕೂಟ ಫೌಂಡೇಶನ್  ಮಹಿಳಾ ವಿಭಾಗ, ಜೂನ್ 21 ರಂದು ಯೋಗ ದಿನಾಚರಣೆ ,

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk