August 4, 2026
Mumbai News Kannada
ಸುದ್ದಿ

ಪುತ್ತೂರು :ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ!





ಧರ್ಮಸ್ಥಳ ಸಹಾಯಕ ಆಯುಕ್ತರು ಇಂದು (ಮಾ. 17)ಮೂರನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದ್ದಾರೆ
ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮೂರನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಹೊರಡಿಸಿ ಶಾಕ್ ನೀಡಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ಅದರಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಮಾ.16, 2026 ರಿಂದ ಸೆ.19, 2026ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನೆಲೆಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ತಿಮರೋಡಿ ಅವರಿಗೆ ಈ ಹಿಂದೆ ಎರಡನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದಾಗ, ಅವರು ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, ಆದೇಶವನ್ನು ಮರುಪರಿಶೀಲಿಸುವಂತೆ ಪುತ್ತೂರು ಎಸಿಗೆ ಸೂಚಿಸಿತ್ತು. ಪ್ರತಿವಾದಿಗಳ ಆಕ್ಷೇಪಣೆಗಳನ್ನು ಆಲಿಸಿ, ಕಾನೂನುಬದ್ಧವಾಗಿ ಹೊಸ ಆದೇಶ ಹೊರಡಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಗಡುವಿನ ಹಿನ್ನೆಲೆಯಲ್ಲಿ ಈಗ ಮರುಪರಿಶೀಲನೆ ನಡೆಸಿ ಮೂರನೇ ಬಾರಿ ಈ ಆದೇಶ ಹೊರಡಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರ ಮೇಲೆ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಭಾಷಣಗಳು ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಈಗಾಗಲೇ ಎರಡು ಬಾರಿ ಹೈಕೋರ್ಟ್ ಮೂಲಕ ತಡೆಯಾಜ್ಞೆ ಪಡೆಯಲು ಯತ್ನಿಸಿದ್ದ ತಿಮರೋಡಿ ಅವರಿಗೆ ಈ ಮೂರನೇ ಆದೇಶವು ದೊಡ್ಡ ಹಿನ್ನಡೆಯಾಗಿದೆ. ಹೈಕೋರ್ಟ್ ಸೂಚನೆಯನ್ನು ಪಾಲಿಸಿ, ನಿಯಮಬದ್ಧವಾಗಿಯೇ ಎಸಿ ಅವರು ಈ ಆದೇಶ ನೀಡಿರುವುದರಿಂದ, ತಿಮರೋಡಿ ಈಗ ರಾಯಚೂರಿಗೆ ತೆರಳುತ್ತಾರಾ ಅಥವಾ ಮತ್ತೆ ಕಾನೂನು ಹೋರಾಟ ಮುಂದುವರಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ



Related posts

ಮೂಲ್ಕಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡು ಅವರಿಗೆ ಆದ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ್ ಸ್ವಾಮೀಜಿ ಅವರಿಂದ ಗೌರವ.

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಜೋಗೇಶ್ವರಿ; ಐಲ್ ಬಾಬು ನಿಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk

ವೇದಮೂರ್ತಿ ಪಂಜ ಭಾಸ್ಕರ ಭಟ್‌ಗೆ ‘ವೇದವಿಭೂಷಣ’ ಪ್ರಶಸ್ತಿ

Mumbai News Desk