28 C
Mumbai
September 19, 2026
Mumbai News Kannada
ಸುದ್ದಿ

ಪುತ್ತೂರು :ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ!





ಧರ್ಮಸ್ಥಳ ಸಹಾಯಕ ಆಯುಕ್ತರು ಇಂದು (ಮಾ. 17)ಮೂರನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದ್ದಾರೆ
ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮೂರನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಹೊರಡಿಸಿ ಶಾಕ್ ನೀಡಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ಅದರಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಮಾ.16, 2026 ರಿಂದ ಸೆ.19, 2026ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನೆಲೆಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ತಿಮರೋಡಿ ಅವರಿಗೆ ಈ ಹಿಂದೆ ಎರಡನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದಾಗ, ಅವರು ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, ಆದೇಶವನ್ನು ಮರುಪರಿಶೀಲಿಸುವಂತೆ ಪುತ್ತೂರು ಎಸಿಗೆ ಸೂಚಿಸಿತ್ತು. ಪ್ರತಿವಾದಿಗಳ ಆಕ್ಷೇಪಣೆಗಳನ್ನು ಆಲಿಸಿ, ಕಾನೂನುಬದ್ಧವಾಗಿ ಹೊಸ ಆದೇಶ ಹೊರಡಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಗಡುವಿನ ಹಿನ್ನೆಲೆಯಲ್ಲಿ ಈಗ ಮರುಪರಿಶೀಲನೆ ನಡೆಸಿ ಮೂರನೇ ಬಾರಿ ಈ ಆದೇಶ ಹೊರಡಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರ ಮೇಲೆ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಭಾಷಣಗಳು ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಈಗಾಗಲೇ ಎರಡು ಬಾರಿ ಹೈಕೋರ್ಟ್ ಮೂಲಕ ತಡೆಯಾಜ್ಞೆ ಪಡೆಯಲು ಯತ್ನಿಸಿದ್ದ ತಿಮರೋಡಿ ಅವರಿಗೆ ಈ ಮೂರನೇ ಆದೇಶವು ದೊಡ್ಡ ಹಿನ್ನಡೆಯಾಗಿದೆ. ಹೈಕೋರ್ಟ್ ಸೂಚನೆಯನ್ನು ಪಾಲಿಸಿ, ನಿಯಮಬದ್ಧವಾಗಿಯೇ ಎಸಿ ಅವರು ಈ ಆದೇಶ ನೀಡಿರುವುದರಿಂದ, ತಿಮರೋಡಿ ಈಗ ರಾಯಚೂರಿಗೆ ತೆರಳುತ್ತಾರಾ ಅಥವಾ ಮತ್ತೆ ಕಾನೂನು ಹೋರಾಟ ಮುಂದುವರಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ



Related posts

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್‌ ಉಮೇಶ್‌ ವಿಧಿವಶ

Mumbai News Desk

ಪರಿಯಾಳ ಸಮಾಜ ಮಹಾಸಭಾದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜಮಾಡಿ

Mumbai News Desk

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ.

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk