28 C
Mumbai
September 19, 2026
Mumbai News Kannada
ತುಳುನಾಡು

ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ತಾಲೂಕು ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ





ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ತಾಲೂಕು ಮಟ್ಟದ ಆಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾಪು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸಮಿತಿಯ ತಾಲೂಕು ಅಧ್ಯಕ್ಷರಾದ ನವೀನ್ಚಂದ್ರ ಸುವರ್ಣ ಅವರು ವಹಿಸಿಕೊಂಡು ಪ್ರಸ್ತಾವಿಕ ಮಾತುಗಳನ್ನಾಡಿದರು.
ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾಡಿ ಪಂಚ ಗ್ಯಾರಂಟಿಗಳು ಹೇಗೆ ಬಡವರಿಗೆ ಅನುಕೂಲಕರವಾಗಿದೆ ಎಂಬುದನ್ನು ವಿವರಿಸಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷವಾಗಿ ಅಂಗನವಾಡಿ ಕಾರ್ಯಕರ್ತೆಯರನ್ನು ಆಹ್ವಾನಿಸಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ವಿಜಯ ನಾರಾಯಣ, ಅಂಗನವಾಡಿ ಮೇಲ್ವಿಚಾರಕಿಯರಾದ ಶೈಲಾ, ಫಿಲೋಮಿನ, ಪೂರ್ಣಿಮಾ ಹಾಗೂ ತಾಲೂಕು ಪಂಚಾಯತ್ ಮಹಿಳಾ ಸಿಬ್ಬಂಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಿತಿಯ ಸದಸ್ಯ ಕಾರ್ಯದರ್ಶಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಕಾರ್ಯಕ್ರಮವನ್ನು ನಿರೂಪಿಸಿದರು.
ಸಮಿತಿಯ ಸದಸ್ಯರಾದ ಸುಧೀರ್ ಕರ್ಕೇರ ಧನ್ಯವಾದ ಹೇಳಿದರು.
ಕಾರ್ಯ ಕ್ರಮದಲ್ಲಿ ಸಮಿತಿಯ ಸದಸ್ಯರಾದ ಕೀರ್ತಿಕುಮಾರ್, ರೀನಾ ವಿನುತಾ ಡಿಸೋಜ, ಸವಿತಾ ಕುಂದರ್, ರಾಜೇಶ್ ಮೂಲ್ಯ, ಪ್ರಭಾಕರ್, ಹಸನಬ್ಬ ಶೇಕ್, ಎಸ್. ವಿಜಯ್, ಲವ ಕರ್ಕೇರ, ಉದಯ್. ಸಿ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು



Related posts

ಮೂಲ್ಕಿ: “ಅಮ್ಮನ ಆಸರೆ” ಕಾರ್ಯಕ್ರಮಕ್ಕೆ ಚಾಲನೆ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk

ಗುರು ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಹೆಜಮಾಡಿ ಗರಡಿಯ ಕಾರ್ಣಿಕ: ನೇಮೋತ್ಸವದಲ್ಲಿ ಕಳವಾಗಿದ್ದ ಸರ 24 ಗಂಟೆಯಲ್ಲೇ ಪತ್ತೆ; ವಾರಸುದಾರರಿಗೆ ಹಸ್ತಾಂತರ

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk

ಅಮೀನ್ ಮೂಲಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ ವೈಭವ: ಶ್ರದ್ಧಾಭಕ್ತಿಯಿಂದ ಜರುಗಿದ ಪೂಜಾ ಕೈಂಕರ್ಯಗಳು

Mumbai News Desk