27.2 C
Mumbai
March 19, 2026
Mumbai News Kannada
ತುಳುನಾಡು

ಹೆಜಮಾಡಿ : ಅದ್ದೂರಿಯಾಗಿ ಜರುಗಿದ ‘ಸ್ತ್ರೀ ಸ್ಫೂರ್ತಿ-2026’ ಕಾರ್ಯಕ್ರಮ





ಮಹಿಳೆಯರು ಸವಾಲುಗಳನ್ನು ಸ್ವೀಕರಿಸುವ ದೃಢ ಮನೋಬಲ ಹೊಂದಿರಬೇಕು – ಶ್ರೀಮತಿ ಶ್ವೇತ ಪಳ್ಳಿ

ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಾವಶ್ಯಕ ಎಂದು ಬಿಲ್ಲವರ ಸಂಘದಲ್ಲಿ ಮಾರ್ಚ್ 17 ರಂದು ನಡೆದ ಸ್ತ್ರೀ ಸ್ಪೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀಮತಿ ಶ್ವೇತ ಪಳ್ಳಿ ಅವರು ಅಭಿಪ್ರಾಯಪಟ್ಟರು.

“ನನ್ನ ಸಾಧನೆಗೆ ಯುವವಾಹಿನಿಯೇ ಸ್ಪೂರ್ತಿ. ಹೆಚ್ಚಿನ ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು,” ಎಂದು ಅವರು ತಿಳಿಸಿದರು.

ಹೆಜಮಾಡಿ ಬಿಲ್ಲವರ ಸಂಘದ ಸಹಯೋಗದಲ್ಲಿ ಯುವವಾಹಿನಿ (ರಿ.) ಹೆಜಮಾಡಿ ಘಟಕ, ಮಹಿಳಾ ಮಂಡಳಿ ಬಿಲ್ಲವರ ಸಂಘ ಹಾಗೂ ಬಿರುವೆರ್ ಬ್ರದರ್ಸ್ ಹೆಜಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ವಹಿಸಿದ್ದು ಪ್ರಥಮ ಬಾರಿಗೆ ಹೆಜಮಾಡಿ ಬಿಲ್ಲವರ ಸಂಘದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸ್ತ್ರೀ ಸ್ಪೂರ್ತಿ 2026 ಕಾರ್ಯಕ್ರಮವನ್ನು ಆಯೋಜಿಸಿದ್ದು ಇಂದಿನ ಆಂಧುನಿಕ ಯುಗದಲ್ಲಿ ಮಹಿಳೆ ಮನೆ ಕೆಲಸಕ್ಕೆ ಮಾತ್ರ ಸೀಮಿತವಾಗಿರದೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನು ತಾವು ತೊಡಗಿಸಿಕೊಳ್ಳುತಿದ್ದಾರೆ.ಇಂತಹ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಗೌರವಿಸಿದರೆ ಇತರ ಮಹಿಳೆಯರಿಗೂ ವಿವಿಧ ಕ್ಷೇತ್ರಗಳಲ್ಲಿ ತನ್ನನು ತೊಡಗಿಸಿಕೊಳ್ಳಲು ಈ ಕಾರ್ಯಕ್ರಮ ಸ್ಪೂರ್ತಿಯಾಗಿರುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು .

ವೇದಿಕೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮುಕ್ತೇಸರರಾದ ಶ್ರೀ ದಯಾನಂದ ಹೆಜಮಾಡಿ, ಯುವವಾಹಿನಿ ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ಶ್ರೀ ಸುರೇಶ್ ಪೂಜಾರಿ, ಯುವವಾಹಿನಿ ಅಧ್ಯಕ್ಷರಾದ ಶ್ರೀ ನಿಶಾಂಕ್ ಎಸ್. ಕೋಟ್ಯಾನ್, ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಲಾವಣ್ಯ ಪ್ರಮೋದ್ ಹಾಗೂ ಬಿರುವೆರ್ ಬ್ರದರ್ಸ್ ಅಧ್ಯಕ್ಷರಾದ ಶ್ರೀ ಮನೋಜ್ ಸುವರ್ಣ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕು. ಧನಲಕ್ಷ್ಮಿ ಪೂಜಾರಿ ಅವರಿಗೆ ಸ್ತ್ರೀ ಸ್ಪೂರ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಬಿಲ್ಲವರ ಸಂಘದ ನಾಲ್ಕು ಕರೆಯ ನಾಲ್ವರು ಹಿರಿಯ ಮಹಿಳೆಯರನ್ನು ಸನ್ಮಾನಿಸಲಾಯಿತು.

ಶ್ರೀಮತಿ ನಳಿನಿ ಉಷಾನಂದ ಅವರು ಪ್ರಸ್ತಾವನೆ ಮಾಡಿದರು. ಲಾವಣ್ಯ ಪ್ರಬೋಧ್ ಚಂದ್ರ ಸ್ವಾಗತಿಸಿದರು. ಧೀರಜ್ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಪ್ತಿ ಆರ್. ಸುವರ್ಣ ವಂದಿಸಿದರು.



Related posts

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk