July 7, 2026
Mumbai News Kannada
ಪ್ರಕಟಣೆ

ಮಾ. 23: ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ





ಮುಂಬಯಿ: ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮವು ಮಾ. 22 ರವಿವಾರದಂದು ಮಧ್ಯಾಹ್ನ 3 ಗಂಟೆಯಿಂದ ಪೊಯಿಸರ್ ಜಿಮ್ಖಾನ, ಮಹಾವೀರ ನಗರ, ಕಾಂದಿವಲಿ ಪಶ್ಚಿಮ ಇಲ್ಲಿ ಆಯೋಜಿಸಲಾಗಿದೆ.

​ಸಂಘದ ಅಧ್ಯಕ್ಷರಾದ ಪೊಲ್ಯ ಜಯಪಾಲ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನೋದಾ ಡಿ. ಶೆಟ್ಟಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

​ಮುಖ್ಯ ಅತಿಥಿಯಾಗಿ ಗೊರೆಗಾಂವ್ ಕರ್ನಾಟಕ ಸಂಘದ ಉಪಾಧ್ಯಕ್ಷೆ ಸರಿತಾ ಎಸ್. ನಾಯಕ್ ಪಾಲ್ಗೊಳ್ಳಲಿದ್ದಾರೆ. ಮಹಿಳಾ ವಿಭಾಗದ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಗೀತ ಕಲಾವಿದ ವಿಜಯ ಶೆಟ್ಟಿ ಮೂಡುಬೆಳ್ಳೆ ಮತ್ತು ತಂಡದವರಿಂದ ‘ರಸಮಂಜರಿ’ ಕಾರ್ಯಕ್ರಮ ನಡೆಯಲಿದೆ.

​ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪರಿಸರದ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಗೌರವಾಧ್ಯಕ್ಷ ಪಳ್ಳಿ ಕಾವೇರಿಬೆಟ್ಟು ಜಯಕರ್ ಶೆಟ್ಟಿ, ಉಪಾಧ್ಯಕ್ಷರಾದ ಪ್ರೇಮನಾಥ್ ಪಿ. ಕೋಟ್ಯಾನ್, ವಾರಿಜಾ ಕರ್ಕೆರ, ಗೌರವ ಪ್ರಧಾನ ಕಾರ್ಯದರ್ಶಿ ಸಬಿತಾ ಜಿ. ಪೂಜಾರಿ, ಗೌರವ ಕೋಶಾಧಿಕಾರಿ ಜಗನ್ನಾಥ ಡಿ. ಕುಕ್ಯಾನ್, ಜೊತೆ ಕಾರ್ಯದರ್ಶಿ ಚೇತನ ಶೆಟ್ಟಿ, ಜೊತೆ ಕೋಶಾಧಿಕಾರಿ ಜಯಂತಿ ಸಾಲ್ಯಾನ್, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಶರ್ಮಿಳಾ ಶೆಟ್ಟಿ, ಕಾರ್ಯದರ್ಶಿ ಜಯಲಕ್ಷ್ಮಿ ಶೆಟ್ಟಿ, ಕೋಶಾಧಿಕಾರಿ ಆಶಾ ಮೊಗವೀರ ಹಾಗೂ ಮಹಿಳಾ ವಿಭಾಗದ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಜ.15 ಮತ್ತು 16ರಂದು ಪ್ರಥಮ ವರ್ಧಂತಿ ಉತ್ಸವ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ: ಅ. 10 ರಂದು 25ನೇ ವಾರ್ಷಿಕ  ಮಹಾಸಭೆ,  

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ; ನಾಲಾಸೋಪಾರ ಮೇ 27. ಶ್ರೀ ಶನಿ ಜಯಂತಿ ಉತ್ಸವ.

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ

Mumbai News Desk

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಜ. 12ಕ್ಕೆ ಎನ್. ಪಿ. ಸುವರ್ಣ – ಪ್ರಭಾ ಸುವರ್ಣ ಅವರ ಅಭಿನಂದನಾ ಸಮಾರಂಭ.

Mumbai News Desk