30.6 C
Mumbai
April 23, 2026
Mumbai News Kannada
ಪ್ರಕಟಣೆ

ಕಲ್ಯಾಣ್‌ನಲ್ಲಿ ಇಂದು ಮಹಿಳಾ ದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ





ಕಲ್ಯಾಣ್: ಇಲ್ಲಿನ ಕನ್ನಡ ಸಾಂಸ್ಕೃತಿಕ ಕೇಂದ್ರದ (ರಿ.) ಮಹಿಳಾ ವಿಭಾಗದ ನೇತೃತ್ವದಲ್ಲಿ ಮಾರ್ಚ್ 22ರ ಭಾನುವಾರ (ಇಂದು) ಮಧ್ಯಾಹ್ನ 3 ಗಂಟೆಗೆ ಲೋಕಗ್ರಾಮ್‌ನ ಲೋಕ ಫೆಡರೇಷನ್ ಹಾಲ್‌ನಲ್ಲಿ ‘ಮಹಿಳಾ ದಿನಾಚರಣೆ’ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಶ್ರೀ ಕುಂಠಿನಿ ಪ್ರಕಾಶ್ ಹೆಗ್ಡೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಡೊಂಬಿವಲಿ ಕರ್ನಾಟಕ ಸಂಘದ ಲಲಿತಕಲಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಸುಷ್ಮಾ ದಿವಾಕರ ಶೆಟ್ಟಿ ಇಂದ್ರಾಳಿ ಹಾಗೂ ಗೌರವ ಅತಿಥಿಯಾಗಿ ಮುಂಬಯಿ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ.) ಇದರ ಮಹಿಳಾ ಸಂಪದದ ಕಾರ್ಯಾಧ್ಯಕ್ಷೆ ಶ್ರೀಮತಿ ಸುಶೀಲ ಸುರೇಶ್ ಪೂಜಾರಿ ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ಸಂಸ್ಥೆಯ ನಿಕಟಪೂರ್ವ ಕಾರ್ಯಾಧ್ಯಕ್ಷೆ ಶ್ರೀಮತಿ ಭಾರತಿ ಬಿ. ಶೆಟ್ಟಿ ಅವರಿಗೆ ವಿಶೇಷ ಸನ್ಮಾನ ಹಾಗೂ ಅಭಿನಂದನೆ ಸಲ್ಲಿಸಲಾಗುವುದು. ಸಂಸ್ಥೆಯ ಹಿರಿಯ ಸದಸ್ಯೆ ಶ್ರೀಮತಿ ಕುಮಾರಿ ವಿಠಲ ಶೆಟ್ಟಿ ಅವರಿಗೆ ಸನ್ಮಾನ ಹಾಗೂ ಏಶಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ನಿರ್ಮಿಸಿದ ಸ್ಕೇಟಿಂಗ್ ಪಟು ಕುಮಾರಿ ಖುಷಿ ಹರೀಶ್ ಶೆಟ್ಟಿ ಅವರಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುವುದು.

ಹಿರಿಯ ಲೇಖಕಿ ಶ್ರೀಮತಿ ಶಾರದಾ ಎ. ಅಂಚನ್ ಅವರ ಅಧ್ಯಕ್ಷತೆಯಲ್ಲಿ ‘ಹಾಸ್ಯ ಕವಿಗೋಷ್ಠಿ’ ನಡೆಯಲಿದ್ದು, ಕವಿಗೋಷ್ಠಿಯಲ್ಲಿ ಪ್ರಫುಲ್ಲ ಶೆಟ್ಟಿ, ರೂಪಾ ಸಂಗೊಳ್ಳಿ, ವಾಣಿ ರಘುನಾಥ್, ಇಂದಿರಾ ಕುಲಕರ್ಣಿ, ರಜನಿ ತೋಳಾರ್ ಹಾಗೂ ಹೇಮಾವತಿ ಹೆಗಡೆ ಕವನ ವಾಚಿಸಲಿದ್ದಾರೆ.

​ಮಹಿಳೆಯರಿಗಾಗಿ ಅಡುಗೆ ಸ್ಪರ್ಧೆ ಹಾಗೂ ಸಂಸ್ಥೆಯ ಸದಸ್ಯೆಯರು ಮತ್ತು ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಲಿವೆ ಎಂದು ಗೌರವ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಪ್ರಕಾಶ್ ಹೆಗ್ಡೆ, ಕಾರ್ಯಾಧ್ಯಕ್ಷೆ ಶ್ರೀಮತಿ ಕುಮುದಾ ಡಿ. ಶೆಟ್ಟಿ ಹಾಗೂ ಆಡಳಿತ ಸಮಿತಿ ಮತ್ತು ಮಹಿಳಾ ವಿಭಾಗದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’

Mumbai News Desk

ವಸಾಯಿ ಕರ್ನಾಟಕ ಸಂಘ : ಜ.26 ರಂದು 38ನೇ ವಾರ್ಷಿಕ ಮಹಾಸಭೆ,

Mumbai News Desk

ಜ.12. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ,

Mumbai News Desk

ಸೆಪ್ಟೆಂಬರ್‌ 14 : ಮುಂಬಯಿ ಕನ್ನಡ ಸಂಘದ 83ನೇ ವಾರ್ಷಿಕ ಮಹಾಸಭೆ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk