31 C
Mumbai
March 6, 2026
Mumbai News Kannada
ಲೇಖನ

ಮೇರು ವ್ಯಕ್ತಿತ್ವದ ಸಾಧಕನ ಸಾಧನೆಯನ್ನು ತೆರೆದಿಟ್ಟ ಸುವರ್ಣಯುಗ





ಸುವರ್ಣಯುಗ


ಲೇಖಕರು : ಅನಿತಾ ಪಿ. ತಾಕೊಡೆ
ಪ್ರಕಾಶನ :ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ
ಪುಟ-೨೯೮, ಬೆಲೆ ರೂ. 375

ಮುಂಬೈ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಕಟಣೆ ” ಸುವರ್ಣ ಯುಗ ” ತುಂಬ ಚೆನ್ನಾಗಿ ಮೂಡಿ ಬಂದಿದೆ. ಮುಂಬೈ ನ ಹಿರಿಯ ಉದ್ಯಮಿ, ಸಮಾಜ ಸೇವಕ ರಾಗಿದ್ದ ಶ್ರೀ ಜಯ ಸುವರ್ಣರ , ಬದುಕು, ಸೇವೆ, ಸಾಧನೆ ಕುರಿತಾಗಿ ,ಅಮೂಲ್ಯ ಮಾಹಿತಿಗಳು ಈ ಪುಸ್ತಕದಲ್ಲಿವೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಕುಗ್ರಾಮದ ಬಡ ಕುಟುಂಬ ದಿಂದ ಬಂದ ಜಯ ಸುವರ್ಣರು ಚಿಕ್ಕ ವಯಸ್ಸಿಗೇ ಮುಂಬೈಗೆ ವಲಸೆ ಬಂದು ಹೇಗೆಲ್ಲ ಶ್ರಮ ಪಟ್ಟರು, ಅಸಾದ್ಯ ಅಂತಾದದ್ದು ಹೇಗೆ ಸಾಧಿಸಿ, ತೋರಿಸಿದರು‌ ಎಂಬ‌ ಮಾಹಿತಿಯನ್ನು ಲೇಖಕಿ ಶ್ರೀಮತಿ ಅನಿತಾ ಪೂಜಾರಿ ತಾಕೊಡೆ ಅವರು ಎಳೆಎಳೆಯಾಗಿ ಹೇಳಿದ್ದಾರೆ. ಸುಂದರವಾದ ಭಾಷೆಯಲ್ಲಿ ಮೂಡಿ ಬಂದಿದೆ.
ಅನಿತಾ ಪಿ.ತಾಕೊಡೆಯವರು ಈ ಗ್ರಂಥವನ್ನು ಪ್ರೀತಿ ವಿಶ್ವಾಸ ಗೌರವಗಳ ಭಾವನೆಯಿಂದ ಒಂದು ವ್ರತದಂತೆ ಮಾಡಿ ಯಶಸ್ವಿಯಾಗಿದ್ದಾರೆ. ಅದು ಮುಂಬೈ ಕನ್ನಡಿಗರನ್ನೂ,ಒಳ ನಾಡು ವಿಶೇಷವಾಗಿ ಕರಾವಳಿ ಕರ್ನಾಟಕವನ್ನು ತಲುಪಲಿ. ಏಕೆಂದರೆ ಜಯ ಸುವರ್ಣ ಅವರು ಕರಾವಳಿ ಭಾಗದಿಂದ ಮುಂಬೈಗೆ ಹೋಗಿ ದೊಡ್ಡದನ್ನು ಸಾಧಿಸಿದವರು, ಅಲ್ಲಿನ ಬದುಕಲ್ಲಿ ದಶಕಗಳ ಕಾಲ ಇದ್ದವರು, ಸಾವಿರಾರು ಜನರಿಗೆ ಆಪ್ತರಾದವರು. ಇಂತಹ ಮೇರು ವ್ಯಕ್ತಿತ್ವದ ಜಯ ಸುವರ್ಣರ ಬದುಕನ್ನು ಓದುಗರಿಗೆ ಪರಿಚಯಿಸಿದ ಹೆಗ್ಗಳಿಕೆ ಲೇಖಕಿ ಶ್ರೀಮತಿ ಅನಿತಾ ತಾಕೊಡೆಯವರದ್ದು. “ಸುವರ್ಣ ಯುಗ “ಗ್ರಂಥ ಉತ್ತಮವಾಗಿ ಮೂಡಿ ಬರಲು ಲೇಖಕಿ ತುಂಬ ಶ್ರಮ ವಹಿಸಿದ್ದಾರೆ. ಅದು ಅವರಿಗೆ ಸದಾ ಖುಷಿ ಮತ್ತು ಹೆಮ್ಮೆ ಯ ವಿಷಯವಾಗಿ ಉಳಿಯಲಿದೆ ಎಂಬ ಸದಾಶಯ ನಮ್ಮದು


ಮದನ ಕಣಬೂರ ಬೆಳಗಾವಿ

.

.

.

.

.

.

.



Related posts

ದೀಪಾವಳಿ …….ಬೆಳಕಿನೆಡೆಗೆ ಬದುಕು

Mumbai News Desk

ಉಡುಪಿ ಜಿಲ್ಲೆಯಲ್ಲಿದೆ ಮಹಿಷಾಸುರ ದೇವಾಲಯ,ಮಹಿಷನಿಗೆ ನಡೆಯುತ್ತಿದೆ ಪೂಜೆ

Mumbai News Desk

ವೈಕುಂಠ ಏಕಾದಶಿ 2025: ಮಹತ್ವ, ಮತ್ತು ಆಚರಣೆಗಳು

Mumbai News Desk

ದುಬೈನಲ್ಲಿ ಟೀಮ್ ಇಂಡಿಯಾದ ಐವರು ಸ್ಪಿನ್ನರ್ ಗಳ ರಣನೀತಿಯ ‘ಯಶಸ್ಸಿನ ರೂವಾರಿ ’ವರುಣ್ ಚಕ್ರವರ್ತಿ

Mumbai News Desk

ಬಲೀಂದ್ರ ದೇವರು ತಮ್ಮ ರಾಜ್ಯಕ್ಕೆ ತಾವೇ ಬಂದ್ರು ಹೊಲಿಯೇ‌ ಬಾ… ಕೂ…ಕೂ…ಕೂ….

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿ : ಸೆ. 12ರಿಂದ, ಸೆ. 21ರ ತನಕ “ಯಕ್ಷ ದಶಮಿ ಯಕ್ಷೋತ್ಸವ”

Mumbai News Desk