
ಬೆಂಗಳೂರು: ಬಂಟರ ಸಂಘ ಬೆಂಗಳೂರಿನ ಉಪಾಧ್ಯಕ್ಷೆ , ಉದ್ಯಮಿ ಹಾಗೂ ಸಮಾಜ ಸೇವಕಿ ಕಾಂತಿ ಶೆಟ್ಟಿ ಅವರಿಗೆ ಮಾರ್ಚ್ 29 ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ‘ಉದ್ಯೋಗ ಯೋಗದಾನ ಪುರಸ್ಕಾರ – 2026’ ಪ್ರಶಸ್ತಿಯನ್ನು ಚಿತ್ರನಟಿ ಶಿಲ್ಪಾ ಶೆಟ್ಟಿ ಅವರು ಪ್ರದಾನ ಮಾಡಿ ಸನ್ಮಾನಿಸಿದರು,
ಮೂಲತಃ ತುಳುನಾಡಿನವರಾದ ಕಾಂತಿ ಶೆಟ್ಟಿ ಅವರು ಬೆಂಗಳೂರಿನಲ್ಲಿ ನೆಲೆಸಿದ್ದು, ‘Aircom Solutions Private Limited’ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಮತ್ತು ‘ನಮ್ಮ ಕುಟೀರ’ ಫೌಂಡೇಶನ್ನ ಸಂಸ್ಥಾಪಕ ಟ್ರಸ್ಟಿಯಾಗಿ ಉದ್ಯಮ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇವರು ಕೇವಲ ಉದ್ಯಮ ಕ್ಷೇತ್ರವಷ್ಟೇ ಅಲ್ಲದೆ, ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದು, ಯಶಸ್ವಿ ಕನ್ನಡ ಚಲನಚಿತ್ರ ‘Case No. 18/9’ ಗೆ ಸಹ-ನಿರ್ಮಾಪಕಿಯಾಗಿ ಹಾಗೂ ‘ಚೆಲುವಿ’ ಎಂಬ ಕನ್ನಡ ಧಾರವಾಹಿಯ ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಬಿಜೆಪಿಯ ವಕ್ತಾರೆಯಾಗಿ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿರುವ ಇವರ ನಿರಂತರ ಸಮಾಜಮುಖಿ ಸೇವೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.




