30.5 C
Mumbai
June 8, 2026
Mumbai News Kannada
ಸುದ್ದಿ

ಉದ್ಯಮಿ ಕಾಂತಿ ಶೆಟ್ಟಿಯವರಿಗೆ ‘ಉದ್ಯೋಗ ಯೋಗದಾನ ಪುರಸ್ಕಾರ’





ಬೆಂಗಳೂರು: ಬಂಟರ ಸಂಘ ಬೆಂಗಳೂರಿನ ಉಪಾಧ್ಯಕ್ಷೆ , ಉದ್ಯಮಿ ಹಾಗೂ ಸಮಾಜ ಸೇವಕಿ ಕಾಂತಿ ಶೆಟ್ಟಿ ಅವರಿಗೆ ಮಾರ್ಚ್ 29 ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ‘ಉದ್ಯೋಗ ಯೋಗದಾನ ಪುರಸ್ಕಾರ – 2026’ ಪ್ರಶಸ್ತಿಯನ್ನು ಚಿತ್ರನಟಿ ಶಿಲ್ಪಾ ಶೆಟ್ಟಿ ಅವರು ಪ್ರದಾನ ಮಾಡಿ ಸನ್ಮಾನಿಸಿದರು,
ಮೂಲತಃ ತುಳುನಾಡಿನವರಾದ ಕಾಂತಿ ಶೆಟ್ಟಿ ಅವರು ಬೆಂಗಳೂರಿನಲ್ಲಿ ನೆಲೆಸಿದ್ದು, ‘Aircom Solutions Private Limited’ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಮತ್ತು ‘ನಮ್ಮ ಕುಟೀರ’ ಫೌಂಡೇಶನ್‌ನ ಸಂಸ್ಥಾಪಕ ಟ್ರಸ್ಟಿಯಾಗಿ ಉದ್ಯಮ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.


ಇವರು ಕೇವಲ ಉದ್ಯಮ ಕ್ಷೇತ್ರವಷ್ಟೇ ಅಲ್ಲದೆ, ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದು, ಯಶಸ್ವಿ ಕನ್ನಡ ಚಲನಚಿತ್ರ ‘Case No. 18/9’ ಗೆ ಸಹ-ನಿರ್ಮಾಪಕಿಯಾಗಿ ಹಾಗೂ ‘ಚೆಲುವಿ’ ಎಂಬ ಕನ್ನಡ ಧಾರವಾಹಿಯ ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಬಿಜೆಪಿಯ ವಕ್ತಾರೆಯಾಗಿ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿರುವ ಇವರ ನಿರಂತರ ಸಮಾಜಮುಖಿ ಸೇವೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.



Related posts

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಮುಂಬೈ : ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಸದಸ್ಯ ನಾರಾಯಣ ಉಚ್ಚಿಲ್ ನಿಧನ

Mumbai News Desk

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 

Mumbai News Desk

“ಡ್ರಾಗನ್–ಆನೆ ಒಗ್ಗಟ್ಟಿಗೆ ಕರೆಯೊಡ್ಡಿದ ಷಿ, ಸಹಕಾರಕ್ಕೆ ಬದ್ಧತೆ ತೋರಿದ ಮೋದಿ”

Mumbai News Desk