
ವಸಯಿ: ವಸಯಿ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 28ರ ಶನಿವಾರದಂದು ಎಚ್.ಡಿ. ಬೀಚ್ ರಿಸೋರ್ಟ್, ವಸಯಿ ಇಲ್ಲಿ ಎರಡು ದಿನಗಳ ವಿಹಾರ ಕೂಟ ನಡೆಯಿತು.
ಸಂಘದ ಗೌರವಾಧ್ಯಕ್ಷ ವಿಶ್ವನಾಥ್ ಪಿ. ಶೆಟ್ಟಿ, ಅಧ್ಯಕ್ಷ ಕರ್ನೂರು ಶಂಕರ ಆಳ್ವ, ಉಪಾಧ್ಯಕ್ಷ ರವೀಂದ್ರ ಕೆ. ಶೆಟ್ಟಿ, ಗೌರವ ಕಾರ್ಯದರ್ಶಿ ಹರಿಪ್ರಸಾದ್ ಎಸ್. ಶೆಟ್ಟಿ, ಕೋಶಾಧಿಕಾರಿ ವಿಜಯ್ ಎಂ. ಶೆಟ್ಟಿ, ಜೊತೆ ಕಾರ್ಯದರ್ಶಿ ಸಿ. ಎ. ವಿಜಯ ಕುಂದರ್, ಜೊತೆ ಕೋಶಾಧಿಕಾರಿ ಗಂಗಾಧರ ಟಿ. ಶೆಟ್ಟಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಪಾಂಡು ಎಲ್. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಓ. ಪಿ. ಪೂಜಾರಿ, ಸದಸ್ಯತ್ವ ನೋಂದಣಿ ಕಾರ್ಯಾಧ್ಯಕ್ಷ ಹರೀಶ್ ಎನ್. ಶೆಟ್ಟಿ ಸೇರಿದಂತೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ಎಸ್. ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ ಎ. ಶೆಟ್ಟಿ, ಕೋಶಾಧಿಕಾರಿ ಭಾರತಿ ಎಚ್. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಮಹಿಳಾ ವಿಭಾಗದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.
ವಿಹಾರ ಕೂಟದ ಅಂಗವಾಗಿ ಮನರಂಜನಾ ಕಾರ್ಯಕ್ರಮಗಳು ಹಾಗೂ ಸಾಂಘಿಕ ಚಟುವಟಿಕೆಗಳು ಯಶಸ್ವಿಯಾಗಿ ನೆರವೇರಿದವು.




