September 6, 2026
Mumbai News Kannada
ಮುಂಬಯಿ

ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ಕಾಮಗಾರಿ ಕುರಿತು ಸಭೆ





ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆಯು ಏಪ್ರಿಲ್ 3ರ ಶುಕ್ರವಾರದಂದು ಜರುಗಿತು. ಮುಲ್ಕಿಯ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.

​ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಒಕ್ಕೂಟದ ದಾನಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಇಂಜಿನಿಯರ್ ಗೋಪಾಲ್ ಭಟ್ ಮತ್ತು ಕಂಟ್ರಾಕ್ಟರ್ ಶಿವಪ್ರಸಾದ್ ರೈ ಅವರು ಮುಂದಿನ ಹಂತದ ಕಾಮಗಾರಿಯ ಕುರಿತು ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಉಮಾ ಕೃಷ್ಣ ಶೆಟ್ಟಿ ಅವರನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವಿಸಿದರು ಹಾಗೂ ಶೀಘ್ರಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಅವರಿಗೆ ಮಾಹಿತಿ ನೀಡಿದರು.

​ಸಭೆಯಲ್ಲಿ ಒಕ್ಕೂಟದ ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ನಿರ್ದೇಶಕರಾದ ಶಶಿಧರ್ ಶೆಟ್ಟಿ ಇನ್ನಂಜೆ, ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ, ಬಂಟರ ಸಂಘ ಮುಂಬೈ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ದಿವಾಕರ್ ಶೆಟ್ಟಿ ಇಂದ್ರಾಳಿ, ಹುಬ್ಬಳ್ಳಿ ಬಂಟ್ಸ್ ಸಂಘದ ಸತೀಶ್ ಶೆಟ್ಟಿ, ವಿಶ್ವಪ್ರತಾಪ್ ಶೆಟ್ಟಿ ಮತ್ತು ಕಾಮಗಾರಿಗೆ ಸಂಬಂಧಿಸಿದ ಇತರರು ಉಪಸ್ಥಿತರಿದ್ದರು.

ಸಭಾಭವನದ ವಿಶೇಷತೆಗಳು:

ನಿರ್ಮಾಣಗೊಳ್ಳಲಿರುವ ಈ ಸಭಾಭವನವು ವಿಶಾಲವಾದ ಸಭಾಗ್ರಹ, ಕಿರು ಸಭಾಗ್ರಹ, ಸುಸಜ್ಜಿತ ವೇದಿಕೆ, ಧರ್ಮ ಚಾವಡಿ, ಅಡುಗೆ ಕೋಣೆ, ಗ್ರೀನ್ ರೂಮ್, ಓಪನ್ ಏರ್ ಗಾರ್ಡನ್ ಹಾಗೂ ಆಡಳಿತ ಕಚೇರಿ ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿದೆ.



Related posts

PVSNM ಮಹಿಳಾ ವಿಭಾಗದ ಹಳದಿ ಕುಂಕುಮ.

Mumbai News Desk

ಬೊರಿವಲಿ: ಶ್ರೀ ಜಗದೀಶ್ವರಿ ಮಂದಿರದ ಪುನರ್‌ಪ್ರತಿಷ್ಠಾಪನೆ ಕಾರ್ಯಕ್ರಮ ಆರಂಭ

Mumbai News Desk

ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ; 53ನೇ ವಾರ್ಷಿಕ ಏಕಹಾ ಭಜನಾ ಮಂಗಳೋತ್ಸವ ಸಂಪನ್ನ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ 19 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಸಾಮೂಹಿಕ ಶನಿ ಪೂಜೆ ಮತ್ತು ತಾಳಮದ್ದಳೆ.

Mumbai News Desk

ನೀರನ್ನು ಕುದಿಸಿ, ಪಿಲ್ಟರ್ ಮಾಡಿ ಬಳಸಿ ಬಿ ಎಂ ಸಿಯಿಂದ ಮುಂಬೈ ಜನತೆಗೆ ಸಲಹೆ

Mumbai News Desk