July 23, 2026
Mumbai News Kannada
ಮುಂಬಯಿ

ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ಕಾಮಗಾರಿ ಕುರಿತು ಸಭೆ







ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನದ ಕಾಮಗಾರಿಯ ಕುರಿತ ಸಭೆಯು ಏಪ್ರಿಲ್ 3ರ ಶುಕ್ರವಾರದಂದು ಜರುಗಿತು. ಮುಲ್ಕಿಯ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.

​ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಒಕ್ಕೂಟದ ದಾನಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಇಂಜಿನಿಯರ್ ಗೋಪಾಲ್ ಭಟ್ ಮತ್ತು ಕಂಟ್ರಾಕ್ಟರ್ ಶಿವಪ್ರಸಾದ್ ರೈ ಅವರು ಮುಂದಿನ ಹಂತದ ಕಾಮಗಾರಿಯ ಕುರಿತು ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಉಮಾ ಕೃಷ್ಣ ಶೆಟ್ಟಿ ಅವರನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗೌರವಿಸಿದರು ಹಾಗೂ ಶೀಘ್ರಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಅವರಿಗೆ ಮಾಹಿತಿ ನೀಡಿದರು.

​ಸಭೆಯಲ್ಲಿ ಒಕ್ಕೂಟದ ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ನಿರ್ದೇಶಕರಾದ ಶಶಿಧರ್ ಶೆಟ್ಟಿ ಇನ್ನಂಜೆ, ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ, ಬಂಟರ ಸಂಘ ಮುಂಬೈ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ದಿವಾಕರ್ ಶೆಟ್ಟಿ ಇಂದ್ರಾಳಿ, ಹುಬ್ಬಳ್ಳಿ ಬಂಟ್ಸ್ ಸಂಘದ ಸತೀಶ್ ಶೆಟ್ಟಿ, ವಿಶ್ವಪ್ರತಾಪ್ ಶೆಟ್ಟಿ ಮತ್ತು ಕಾಮಗಾರಿಗೆ ಸಂಬಂಧಿಸಿದ ಇತರರು ಉಪಸ್ಥಿತರಿದ್ದರು.

ಸಭಾಭವನದ ವಿಶೇಷತೆಗಳು:

ನಿರ್ಮಾಣಗೊಳ್ಳಲಿರುವ ಈ ಸಭಾಭವನವು ವಿಶಾಲವಾದ ಸಭಾಗ್ರಹ, ಕಿರು ಸಭಾಗ್ರಹ, ಸುಸಜ್ಜಿತ ವೇದಿಕೆ, ಧರ್ಮ ಚಾವಡಿ, ಅಡುಗೆ ಕೋಣೆ, ಗ್ರೀನ್ ರೂಮ್, ಓಪನ್ ಏರ್ ಗಾರ್ಡನ್ ಹಾಗೂ ಆಡಳಿತ ಕಚೇರಿ ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿದೆ.



Related posts

ಗೋರೆಗಾಂವ್ ಪೂರ್ವ   ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ  59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ ಯಕ್ಷಗಾನ ಬಯಲಾಟ,

Mumbai News Desk

ಕುಲಾಲ ಸಂಘ ಮುಂಬಯಿ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ  ಸ್ನೇಹ ಸಮ್ಮಿಲನ, ಸಾಂಸ್ಕೃತಿಕ ವೈಭವ,

Mumbai News Desk

ಜೋಗೇಶ್ವರಿ : ಸಂಸ್ಕೃತಿ ಅಮೀನ್ ದುರ್ಮರಣ ಪ್ರಕರಣ – ಬಿಲ್ಡರ್ ನ ನಿರೀಕ್ಷಣಾ ಜಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Mumbai News Desk

ಕಲೀನಾ ಸೌತ್ ಸೇವಾ ಸಂಘದ ಸಾರ್ವಜನಿಕ ಗಣೇಶೋತ್ಸವ.

Mumbai News Desk

ಮಲಾಡ್ ಪೂರ್ವ ದ  ಲಕ್ಷ್ಮಣ್ ನಗರದ ಶ್ರೀ ಶನೀಶ್ವರ ಮಹೋತಭಾರ  ದೇವಸ್ಥಾನದ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗು ಶಿಕ್ಷಣದ ನೆರವು.

Mumbai News Desk

ಪನ್ವೇಲ್ ಕರ್ನಾಟಕ ಸಂಘದಲ್ಲಿ 18ನೇ ವರ್ಷದ ಗಣೇಶೋತ್ಸವ ಸಂಭ್ರಮ

Mumbai News Desk