32 C
Mumbai
April 24, 2026
Mumbai News Kannada
ತುಳುನಾಡು

ಸಣ್ಣ ವಯಸ್ಸಿನಲ್ಲೇ ದೈವ ನರ್ತನದ ಮೂಲಕ ಕರಾವಳಿಯ ಗಮನ ಸೆಳೆದ ಅಜೆಕಾರಿನ ಬಾಲಕ ಸಮರ್ಥ್





ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮಮುಗೇರಕಲ ಕ್ಷೇತ್ರದಲ್ಲಿ ನಡೆದ ತನ್ನಿಮಾನಿಗ ನೇಮೋತ್ಸವದಲ್ಲಿ 12 ವರ್ಷದ ಬಾಲಕನೊಬ್ಬ ದೈವ ನರ್ತನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ಶಿರ್ಲಾಲು ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾದ ಸಮರ್ಥ್ ಎಂಬ ಈ ಬಾಲಕ, ಅತ್ಯಂತ ಸಣ್ಣ ವಯಸ್ಸಿನಲ್ಲೇ ದೈವದ ಗಗ್ಗರ ಕಟ್ಟಿ, ಸಂಪ್ರದಾಯಬದ್ಧವಾಗಿ ನೇಮೋತ್ಸವ ನಡೆಸಿಕೊಟ್ಟಿದ್ದಾನೆ. ಈತನ ದೈವ ನರ್ತನದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತುಳುನಾಡಿನ ದೈವಾರಾಧನೆಯ ಸಂಸ್ಕೃತಿಯನ್ನು ಎತ್ತಿಹಿಡಿಯುವಂತಿದೆ.
ಸಮರ್ಥ್ ತನ್ನ ಅಜ್ಜ ಮತ್ತು ತಂದೆ ಹರೀಶ್ ಅವರ ಮಾರ್ಗದರ್ಶನದಲ್ಲಿ ಈ ಕಲೆಯನ್ನು ಮೈಗೂಡಿಸಿಕೊಂಡಿದ್ದು, ವಂಶಪಾರಂಪರ್ಯವಾಗಿ ಬಂದಿರುವ ಈ ದೈವ ಸೇವೆಯನ್ನು ಶ್ರದ್ಧೆಯಿಂದ ಮುಂದುವರಿಸಿಕೊಂಡು ಹೋಗುತ್ತಿದ್ದಾನೆ. ತನ್ನಿಮಾನಿಗ ದೈವದ ಕೋಲ ಕಟ್ಟುವವರು ಅವಿವಾಹಿತರಾಗಿರಬೇಕು ಮತ್ತು ನಸುಕಿನ ವೇಳೆಯಲ್ಲಿ ಈ ಸೇವೆ ನಡೆಯಬೇಕು ಎಂಬ ಕಟ್ಟುನಿಟ್ಟಿನ ನಿಯಮಗಳಿದ್ದು, ಇವೆಲ್ಲವನ್ನೂ ಪಾಲಿಸಿ ಈ ಬಾಲಕ ಯಶಸ್ವಿಯಾಗಿ ದೈವ ನರ್ತನ ಮಾಡಿದ್ದಾನೆ. ಈ ಕೋಲದ ಸಮಯದಲ್ಲಿ ದೈವಕ್ಕೆ ಮದುವೆ ಮಾಡಿಸುವ ಅಪರೂಪದ ಸಂಪ್ರದಾಯವೂ ನಡೆಯುತ್ತದೆ. ಬಾಲಕನ ಈ ಭಕ್ತಿ ಮತ್ತು ಶ್ರದ್ಧೆಯನ್ನು ಕಂಡು ಸ್ಥಳೀಯರು ಹಾಗೂ ದೈವಾರಾಧಕರು ವ್ಯಾಪಕವಾಗಿ ಪ್ರಶಂಸಿಸುತ್ತಿದ್ದು, ಇದು ತುಳುನಾಡಿನ ಹೆಮ್ಮೆ ಎಂದು ಬಣ್ಣಿಸಿದ್ದಾರೆ.



Related posts

ಸುರತ್ಕಲ್ ಬಂಟರ ಸಂಘದಲ್ಲಿ “ಆಟಿದ ಪೊರ್ಲು” ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಗಡಿಪ್ರದಾನ ಸ್ವೀಕರಿಸಿದ ಪಾತ್ರಾಡಿಗುತ್ತು  ಪುಷ್ಪರಾಜ್ ಶೆಟ್ಟಿ ಸಾಮಾನಿ ಗುತ್ತಿನಾರ್ ಗೌರವ,

Mumbai News Desk

ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆ

Mumbai News Desk

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ಕ್ಕೆ ಚಾಲನೆ

Mumbai News Desk