July 23, 2026
Mumbai News Kannada
ಮುಂಬಯಿ

ನಾರಾಯಣ ಗುರುಗಳ ತತ್ವದೊಂದಿಗೆ ಸಮಾಜ ಸಂಘಟನೆಯಾಗಲಿ: ಸೂರ್ಯಕಾಂತ್ ಜಯ ಸುವರ್ಣ







ಮುಂಬಯಿ: “ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಾವೆಲ್ಲರೂ ಒಗ್ಗಟ್ಟಿನಿಂದ ಸಮಾಜದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು,” ಎಂದು ಭಾರತ್ ಬ್ಯಾಂಕ್ ಕಾರ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಕರೆ ನೀಡಿದರು.

​ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ), ಮುಂಬೈ, ಜಯ ಸಿ. ಸುವರ್ಣ ಅಭಿಮಾನಿ ಬಳಗ ಹಾಗೂ ಮುಂಬಯಿ ಬಿಲ್ಲವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಗೋರೆಗಾಂವ್ ಪೂರ್ವದ ಜಯಲೀಲಾ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಶನಿ ಪೂಜೆ ಮತ್ತು ಭಜನಾ ಸಂಧ್ಯಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

​ಬಿಲ್ಲವರ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಹಾಗೂ ಭಾರತ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ಶಾಂತಿ ಅವರ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠಾಪನೆ ನೆರವೇರಿತು. ಮುಂಬಯಿಯ ಖ್ಯಾತ ಕಲಾವಿದರು ಹಾಗೂ ವಿಶೇಷ ಅತಿಥಿ ಕಲಾವಿದರಿಂದ ಯಕ್ಷಗಾನ ಶೈಲಿಯಲ್ಲಿ ‘ಶ್ರೀ ಶನೀಶ್ವರ ಗ್ರಂಥ ಪಾರಾಯಣ’ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಶೇಖರ್ ಶಾಂತಿ, ಧನಂಜಯ ಶಾಂತಿ ಹಾಗೂ ರವೀಂದ್ರ ಶಾಂತಿ ಅವರ ಸಹಕಾರದಲ್ಲಿ ಮಹಾಮಂಗಳಾರತಿ ನಡೆದು, ಬಳಿಕ ತೀರ್ಥ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು.

​ಇದೇ ಸಂದರ್ಭದಲ್ಲಿ ಬಿಲ್ಲವರ ಅಸೋಸಿಯೇಷನ್ ಸೇವಾದಳದ ಮಾಜಿ ಜಿಒಸಿ ಗಣೇಶ್ ಪೂಜಾರಿ ಅವರನ್ನು ದೇವರ ಪ್ರಸಾದ ನೀಡಿ ವಿಶೇಷವಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಭಾರತ್ ಬ್ಯಾಂಕ್ ಉಪ ಕಾರ್ಯಾಧ್ಯಕ್ಷ ಅಡ್ವೊಕೇಟ್ ಸೋಮನಾಥ್ ಅಮೀನ್, ನಿರ್ದೇಶಕರುಗಳಾದ ಭಾಸ್ಕರ್ ಸಾಲಿಯನ್, ಗಂಗಾಧರ್ ಪೂಜಾರಿ, ಅಶೋಕ್ ಎಂ. ಕೋಟ್ಯಾನ್, ಮೋಹನ್ ಜಿ. ಪೂಜಾರಿ, ಸಂತೋಷ್ ಕೆ. ಪೂಜಾರಿ, ಸುರೇಶ್ ಸುವರ್ಣ, ನಾರಾಯಣ್ ಸುವರ್ಣ, ನರೇಶ್ ಪೂಜಾರಿ, ದಯಾನಂದ್ ಪೂಜಾರಿ, ಹರೀಶ್ ಪೂಜಾರಿ, ನಿರಂಜನ್ ಪೂಜಾರಿ, ನಿತ್ಯಾನಂದ್ ಕೋಟ್ಯಾನ್, ಪ್ರಜ್ವಲ್ ಪೂಜಾರಿ ಹಾಗೂ ಅಶೋಕ್ ಕೋಟ್ಯಾನ್ ಉಪಸ್ಥಿತರಿದ್ದರು.

​ಅಲ್ಲದೆ, ಬ್ಯಾಂಕ್ ಉಪ ಎಂ.ಡಿ. ದಿನೇಶ್ ಬಿ. ಸಾಲ್ಯಾನ್, ಜಿ.ಎಂ. ಜನಾರ್ಧನ್ ಪೂಜಾರಿ, ಮಹೇಶ್ ಕೋಟ್ಯಾನ್, ಸತೀಶ್ ಬಂಗೇರ, ಜ್ಯೋತಿಷಿ ಡಾ. ಪ್ರವೀಣ್ ಎಂ. ಭಟ್, ರಾಜಕೀಯ ಮುಖಂಡ ಲಕ್ಷ್ಮಣ್ ಪೂಜಾರಿ, ಸದಾಶಿವ ಕರ್ಕೇರ, ಉದ್ಯಮಿಗಳಾದ ಸುರೇಂದ್ರ ಎ. ಪೂಜಾರಿ, ಹರೀಶ್ ಎಸ್. ಪೂಜಾರಿ ವಡಾಲ, ಮಹೇಶ್ ಕರ್ಕೇರ, ರಾಮ ಜಿ. ಸುವರ್ಣ, ಉಮೇಶ್ ಕಾಪು, ಗಣೇಶ್ ಆರ್. ಪೂಜಾರಿ, ಪ್ರದೀಪ್ ಪೂಜಾರಿ, ಜೆ.ವಿ. ಕೋಟ್ಯಾನ್, ಎಂ.ಕೆ. ಹರೀಶ್, ನಾಗೇಶ್ ಪೂಜಾರಿ, ನರೇಶ ಪೂಜಾರಿ ಭಯಂದರ್ ಸೇರಿದಂತೆ ಜಯ ಸಿ. ಸುವರ್ಣ ಅವರ ಅಭಿಮಾನಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

​ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಅಧ್ಯಕ್ಷ ಅಶೋಕ್ ಸಸಿಹಿತ್ಲು, ಗೌರವ ಪ್ರಧಾನ ಕಾರ್ಯದರ್ಶಿ ಕೇಶವ ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ಮಹಿಳಾ ಮತ್ತು ಯುವ ವಿಭಾಗದ ಸದಸ್ಯರು ಅತಿಥಿಗಳನ್ನು ಗೌರವಿಸಿದರು.

ವರದಿ: ದಿನೇಶ್ ಕುಲಾಲ್



Related posts

ಮೀರಾರೋಡ್ ಶ್ರೀ ದುರ್ಗಾ ಭಜನ್ ಮಂಡಳಿಯ 18ನೇ ವಾರ್ಷಿಕ ಮಹಾಪೂಜೆ.

Mumbai News Desk

ಸಹಾರ್‌ಗಾಂವ್ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ – 36ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಮಂಡಲ ಪೂಜೆ.

Mumbai News Desk

ಮುಲುಂಡಿನ ವಿದ್ಯಾ ಪ್ರಸಾರಕ ಮಂಡಳದ ಕನ್ನಡ ಮಾಧ್ಯಮದ ಶಾಲೆಯಲ್ಲಿ ಪಾಲಕ ಶಿಕ್ಷಕ ಸಂಘದ ಮಹಾಸಭೆ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ನಲಾಸೋಪಾರ – ವಿರಾರ್  ಸ್ಥಳೀಯ ಸಮಿತಿಯ ಅರಸಿನ ಕುಂಕುಮ ಕಾರ್ಯಕ್ರಮ 

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ : ಮೀರಾರೋಡ್ ಸಮಿತಿವತಿಯಿಂದ ಧಾರ್ಮಿಕ ಯಾತ್ರೆ

Mumbai News Desk

*ದಿ. ಜ್ಯೋತಿ ಸುವರ್ಣರಿಗೆ  ಶ್ರದ್ಧಾಂಜಲಿ ಸಭೆ.

Mumbai News Desk