July 23, 2026
Mumbai News Kannada
ಪ್ರಕಟಣೆ

ಎ. 11, ವಿದ್ಯಾದಾಯಿನಿ ಸಭಾ ಮುಂಬಯಿ ಮತ್ತು ತುಳು ಧಾರ್ಮಿಕ ಸಂಶೋಧನಾ ಕೇಂದ್ರ ಪೇರೂರು ಇದರ ಜಂಟಿ ಆಯೋಜಕತ್ವದಲ್ಲಿ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ.







ಮುಂಬಯಿ, ಎ 2: ಪೇರೂರು ತುಳು ಧಾರ್ಮಿಕ ಸಂಶೋಧನಾ ಕೇಂದ್ರದ ವತಿಯಿಂದ ಪ್ರತೀ ವರ್ಷ (ದಿವಂಗತರಾದ ಪೇರೂರು ರುಕ್ಕು ಪೂಜಾರ್ದಿ, ಪೇರೂರು ಬಾಗಿ ಪೂಜಾರ್ದಿ, ಪೇರೂರು ಲೆಚ್ಚು ಪೂಜಾರ್ದಿ ಸ್ಮರಣಾರ್ಥ) ಕೊಡಮಾಡುವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭವು ಪ್ರಸ್ತುತ ವರ್ಷದಲ್ಲಿ ವಿದ್ಯಾದಾಯಿನಿ ಸಭಾ ಮುಂಬಯಿ ಇದರ ಜಂಟಿ ಆಯೋಜಕತ್ವದಲ್ಲಿ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ವಠಾರದಲ್ಲಿ (ನಗರಪಾಲಿಕಾ ಶಾಲೆ ಮನೋಹರ್ ದಾಸ್ (ಮೋದಿ) ಸ್ಟ್ರೀಟ್, ಜಿ.ಪಿ.ಒ ಎದುರು, ಫೋರ್ಟ್ ಮುಂಬಯಿ) ಶನಿವಾರ ಎ 11ರಂದು ಸಾಯಂಕಾಲ ಗಂಟೆ 6.30ರಿಂದ ಜರಗಲಿದೆ. ಈ ಸಂದರ್ಭದಲ್ಲಿ ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲಾ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಲಾಗುವುದು.

​ಪ್ರಸ್ತುತ ವರ್ಷದ ಪ್ರಶಸ್ತಿಯನ್ನು ಮರಾಠಿ ಕವಯಿತ್ರಿ, ಮುನ್ಸಿಪಲ್ ಟೀಚರ್ಸ್ ಕೋಪರೇಟಿವ್ ಬ್ಯಾಂಕಿನ ನಿರ್ದೇಶಕಿ ಹಾಗೂ ನಗರಪಾಲಿಕಾ ಶಾಲಾ ಶಿಕ್ಷಕಿ ಶೋಭಾ ಪ್ರವೀಣ್ ಗಾಯಕ್ವಾಡ್ ಹಾಗೂ ಕನ್ನಡ ಭವನ ಹೈಸ್ಕೂಲ್ ಮತ್ತು ಜ್ಯೂನಿಯರ್ ಕಾಲೇಜು ಶಿಕ್ಷಕಿ ಚಿತ್ರಲೇಖಾ ಆರ್. ಮಾಲಿಯವರಿಗೆ ನೀಡಲಾಗುವುದು.

​ವಿದ್ಯಾದಾಯಿನಿ ಸಭಾದ ಅಧ್ಯಕ್ಷ ಪುರುಷೋತ್ತಮ ಎಸ್. ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಹೇಶ್ ಗ್ರೂಪ್ ಆಫ್ ಹೋಟೇಲ್ಸಿನ ಮುಖ್ಯ ಆಡಳಿತ ನಿರ್ದೇಶಕಿ ಶಾರದಾ ಸೂರು ಕರ್ಕೇರ, ಕರ್ನಾಟಕ ಮಲ್ಲ ದಿನಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ, ತುಳು ಧಾರ್ಮಿಕ ಸಂಶೋಧನಾ ಕೇಂದ್ರ ಪೇರೂರು ಇದರ ಅಧ್ಯಕ್ಷ ಪೇರೂರು ಜಾರು, ಚೆಂಬೂರು ಕರ್ನಾಟಕ ಹೈಸ್ಕೂಲ್ ಶಿಕ್ಷಕಿ ವಿಜೇತ ಮಹೇಶ್ ಸುವರ್ಣ ಆಗಮಿಸಲಿರುವರು.

​ಈ ಕಾರ್ಯಕ್ರಮದಲ್ಲಿ ವಿದ್ಯಾದಾಯಿನಿ ಸಭಾದ ಹಿತಚಿಂತಕರು, ಸದಸ್ಯರು, ರಾತ್ರಿ ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪ್ರಿಯರು ಉಪಸ್ಥಿತರಿರಬೇಕಾಗಿ ವಿದ್ಯಾದಾಯಿನಿ ಸಭಾದ ಗೌರವಾಧ್ಯಕ್ಷ ಜೆ. ಎಮ್. ಕೋಟ್ಯಾನ್, ಉಪಾಧ್ಯಕ್ಷ ಆರ್. ಕೆ. ಕೋಟ್ಯಾನ್, ಕಾರ್ಯದರ್ಶಿ ಹರೀಶ್ ಶಾಂತಿ, ಕೋಶಾಧಿಕಾರಿ ಗೋಪಾಲ್ ಪೂಜಾರಿ, ಜೊತೆ ಕಾರ್ಯದರ್ಶಿ ಶರತ್ ಪೂಜಾರಿ, ಜೊತೆ ಕೋಶಾಧಿಕಾರಿ ಶ್ರೀಧರ್ ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಆರ್. ಕೋಟ್ಯಾನ್, ಶಾಲಾ ಉಸ್ತುವಾರಿ ಡಾ. ಪ್ರಕಾಶ್ ಮೂಡಬಿದಿರೆ, ಶಾಲಾ ಮುಖ್ಯೋಪಾಧ್ಯಾಯ ಪ್ರಕಾಶ್ಚಂದ್ರ ಎಮ್. ಆರ್. ಬಂಗೇರ ಹಾಗೂ ತುಳು ಧಾರ್ಮಿಕ ಸಂಶೋಧನಾ ಕೇಂದ್ರದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಜ. 24 ಮತ್ತು 25 ; ಗೋರೆಗಾಂವ್ (ಪೂರ್ವ)ದ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ 61ನೇ ವಾರ್ಷಿಕ ಮಹೋತ್ಸವ ಹಾಗೂ ಗುರುಮೂರ್ತಿ ಅಭಿಷೇಕ

Mumbai News Desk

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

Mumbai News Desk

ಜ. 28  ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ 

Mumbai News Desk

ಮೂಲ ಸಿರಿ ಕುಮಾರ ಶ್ರೀ ಬ್ರಹ್ಮಲಿಂಗೇಶ್ವರ ಆದಿ ಆಲಡೆ, ಪಾಂಗಾಳ, ವಾರ್ಷಿಕ ಪಾಂಗಾಳ ಆಯನ ಸಿರಿಜಾತ್ರೆ

Mumbai News Desk

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk