30.9 C
Mumbai
June 8, 2026
Mumbai News Kannada
ಪ್ರಕಟಣೆ

ಮಲಾಡ್: ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಇಂದು (ಏಪ್ರಿಲ್ 11) ಧರ್ಮ ದೈವಗಳ ಗಗ್ಗರ ಸೇವೆ (ಕೋಲ)






ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್, ಕೇತುವಾಡಿಯ ಜಾನ್ ಕಂಪೌಂಡ್‌ನಲ್ಲಿ ನೆಲೆಸಿರುವ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರಲಾಗುತ್ತಿರುವ ಸತ್ಯದೇವತೆ, ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಗಗ್ಗರ ಸೇವೆ (ಕೋಲ) ಏಪ್ರಿಲ್ 11ರ ಶನಿವಾರದಂದು ಅದ್ದೂರಿಯಾಗಿ ನಡೆಯಲಿದೆ.


ಕಾರ್ಯಕ್ರಮಗಳ ವಿವರ:


ದಿನದ ಧಾರ್ಮಿಕ ವಿಧಿವಿಧಾನಗಳು ಮಧ್ಯಾಹ್ನ 12:00 ಗಂಟೆಗೆ ಚಪ್ಪರ ಮುಹೂರ್ತದೊಂದಿಗೆ ಆರಂಭವಾಗಲಿವೆ. ತದನಂತರ 12:30ಕ್ಕೆ ದೈವಗಳ ಬಂಡಾರ ಇಳಿಸುವಿಕೆ ನಡೆಯಲಿದೆ. ಸಂಜೆ 5:00 ಗಂಟೆಯಿಂದ ಸತ್ಯದೇವತೆ, ಕಲ್ಕುಡ, ಕಲ್ಲುರ್ಟಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ಜರುಗಲಿದ್ದು, ರಾತ್ರಿ 8:00 ಗಂಟೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.


​ದೇವಸ್ಥಾನದ ಧರ್ಮದರ್ಶಿಗಳಾದ ರವಿ ಸ್ವಾಮೀಜಿ ಹಾಗೂ ಶ್ರೀ ದೇವಿ ಮಹಮ್ಮಾಯಿ ಸೇವಾ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಸಂತೋಷ್ ಕೆ. ಪೂಜಾರಿ, ಅಧ್ಯಕ್ಷರಾದ ಲಾಲ್ ಮನ್ ಯಾದವ್, ಕಾರ್ಯದರ್ಶಿ ಉದಯ ಬಿ. ಸಾಲ್ಯಾನ್, ಕೋಶಾಧಿಕಾರಿ ಹರಿಶ್ಚಂದ್ರ ಆಚಾರ್ಯ, ಸಲಹೆಗಾರರಾದ ಸುರೇಂದ್ರ ಶೆಟ್ಟಿ ಹೊಸ್ಮರು, ಸುಧೀರ್ ಪುತ್ರನ್ ಮತ್ತು ಸಮಿತಿಯ ಸರ್ವ ಸದಸ್ಯರು ಈ ಪುಣ್ಯ ಕಾರ್ಯದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಾಯಿ ಮಹಮ್ಮಾಯಿ ಹಾಗೂ ಧರ್ಮ ದೈವಗಳ ಗಂಧ ಪ್ರಸಾದ ಮತ್ತು ಮಹಾಪ್ರಸಾದವನ್ನು ಸ್ವೀಕರಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




Related posts

ಫೆ.7, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಕೋಟೆ, ನಾಲಾಸೋಪಾರ : ಫೆ. 1ರಿಂದ 81ನೇ ವಾರ್ಷಿಕ ಶನಿಮಹಾ ಪೂಜೆ ಮತ್ತು ಜಾತ್ರಾ ಮಹೋತ್ಸವ

Mumbai News Desk

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ

Mumbai News Desk

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್: ಡಿ.16ರಂದು ವಾರ್ಷಿಕ ಮಹಾಪೂಜೆ

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 9ಕ್ಕೆ “ಸಾಫಲ್ಯ ಸ್ತ್ರಿ ಶಕ್ತಿ ” ವಿಶೇಷ ಕಾರ್ಯಕ್ರಮ.

Mumbai News Desk