July 23, 2026
Mumbai News Kannada
ಪ್ರಕಟಣೆ

ಮಲಾಡ್: ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಇಂದು (ಏಪ್ರಿಲ್ 11) ಧರ್ಮ ದೈವಗಳ ಗಗ್ಗರ ಸೇವೆ (ಕೋಲ)








ಮುಂಬಯಿ: ಮಲಾಡ್ ಪೂರ್ವದ ಕುರಾರ್ ವಿಲೇಜ್, ಕೇತುವಾಡಿಯ ಜಾನ್ ಕಂಪೌಂಡ್‌ನಲ್ಲಿ ನೆಲೆಸಿರುವ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರಲಾಗುತ್ತಿರುವ ಸತ್ಯದೇವತೆ, ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಗಗ್ಗರ ಸೇವೆ (ಕೋಲ) ಏಪ್ರಿಲ್ 11ರ ಶನಿವಾರದಂದು ಅದ್ದೂರಿಯಾಗಿ ನಡೆಯಲಿದೆ.


ಕಾರ್ಯಕ್ರಮಗಳ ವಿವರ:


ದಿನದ ಧಾರ್ಮಿಕ ವಿಧಿವಿಧಾನಗಳು ಮಧ್ಯಾಹ್ನ 12:00 ಗಂಟೆಗೆ ಚಪ್ಪರ ಮುಹೂರ್ತದೊಂದಿಗೆ ಆರಂಭವಾಗಲಿವೆ. ತದನಂತರ 12:30ಕ್ಕೆ ದೈವಗಳ ಬಂಡಾರ ಇಳಿಸುವಿಕೆ ನಡೆಯಲಿದೆ. ಸಂಜೆ 5:00 ಗಂಟೆಯಿಂದ ಸತ್ಯದೇವತೆ, ಕಲ್ಕುಡ, ಕಲ್ಲುರ್ಟಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ ಜರುಗಲಿದ್ದು, ರಾತ್ರಿ 8:00 ಗಂಟೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.


​ದೇವಸ್ಥಾನದ ಧರ್ಮದರ್ಶಿಗಳಾದ ರವಿ ಸ್ವಾಮೀಜಿ ಹಾಗೂ ಶ್ರೀ ದೇವಿ ಮಹಮ್ಮಾಯಿ ಸೇವಾ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾದ ಸಂತೋಷ್ ಕೆ. ಪೂಜಾರಿ, ಅಧ್ಯಕ್ಷರಾದ ಲಾಲ್ ಮನ್ ಯಾದವ್, ಕಾರ್ಯದರ್ಶಿ ಉದಯ ಬಿ. ಸಾಲ್ಯಾನ್, ಕೋಶಾಧಿಕಾರಿ ಹರಿಶ್ಚಂದ್ರ ಆಚಾರ್ಯ, ಸಲಹೆಗಾರರಾದ ಸುರೇಂದ್ರ ಶೆಟ್ಟಿ ಹೊಸ್ಮರು, ಸುಧೀರ್ ಪುತ್ರನ್ ಮತ್ತು ಸಮಿತಿಯ ಸರ್ವ ಸದಸ್ಯರು ಈ ಪುಣ್ಯ ಕಾರ್ಯದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಾಯಿ ಮಹಮ್ಮಾಯಿ ಹಾಗೂ ಧರ್ಮ ದೈವಗಳ ಗಂಧ ಪ್ರಸಾದ ಮತ್ತು ಮಹಾಪ್ರಸಾದವನ್ನು ಸ್ವೀಕರಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.




Related posts

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ಇಂದು ಡೊಂಬಿವಲಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 15 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

ಜ. 30 ರಿಂದ ಫೆ.1ರ ತನಕ ಜರ್ಮನಿನಲ್ಲಿ ಓಪನ್ ವರ್ಲ್ಡ್ ವೇಟ್ ಲಿಪ್ಟಿಂಗ್ ಚಾಂಪಿಯನ್‌ಶಿಪ್‌

Mumbai News Desk