July 23, 2026
Mumbai News Kannada
ಪ್ರಕಟಣೆ

ಡಿ.10 ರಂದು ಕರ್ನಾಟಕ ಸಂಘ, ಡೊಂಬಿವಲಿಯ ನಾಡಹಬ್ಬ ಸಮಾರಂಭ







ಕರ್ನಾಟಕ ಸಂಘ, ಡೊಂಬಿವಲಿ ಇದರ ಲಲಿತ ಕಲಾ ವಿಭಾಗ ಮತ್ತು ಮಹಿಳಾ ವಿಭಾಗದ ಸಂಯೋಜನೆಯಲ್ಲಿ ನಾಡಹಬ್ಬ ಸಮಾರಂಭ ನಾಳೆ ದಿನಾಂಕ 10.12.2023 ರವಿವಾರ ಸಂಜೆ 4.30 ಕ್ಕೆ ಠಾಕುರ್‌ಹಾಲ್, ಟಂಡನ್ ರಸ್ತೆ, ಡೊಂಬಿವಲಿ (ಪೂರ್ವ) ದಲ್ಲಿ ಕರ್ನಾಟಕ ಸಂಘ, ಡೊಂಬಿವಲಿ ಇದರ ಅಧ್ಯಕ್ಷರಾದ ಸುಕುಮಾರ ಎನ್. ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರುಗಲಿರುವುದು. ಕಾರ್ಯಾಧ್ಯಕ್ಷರಾದ ದಿವಾಕರ ಟಿ. ಶೆಟ್ಟಿ, ಇಂದ್ರಾಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಮುಖ್ಯ ಅತಿಥಿಯಾಗಿ ಕನ್ನಡ ವಿಶ್ವವಿದ್ಯಾಲಯ, ಹಂಪಿಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಎ.ಸುಬ್ಬಣ್ಣ ರೈ, ಉಪಸ್ಥಿತರಿರುವರು.

ದೇಶ ಭಕ್ತಿ ಗೀತೆ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಮಹಿಳಾ ವಿಭಾಗದವರಿಂದ ನೃತ್ಯ ವೈಭವ ನಡೆಯಲಿದೆ.

ಉಪಾಧ್ಯಕ್ಷರಾದ ಲೋಕನಾಥ ಎ. ಶೆಟ್ಟಿ, ಉಪ-ಕಾರ್ಯಾಧ್ಯಕ್ಷರಾದ ದೇವದಾಸ ಎಲ್. ಕುಲಾಲ್, ಗೌ.ಪ್ರ.ಕಾರ್ಯದರ್ಶಿ ಅಜಿತ್ ಬಿ. ಉಮ್ರಾಣಿ, ಗೌ. ಕೋಶಾಧಿಕಾರಿ ತಾರಾನಾಥ ಎಸ್. ಅಮೀನ್, ಜೊತೆ ಕಾರ್ಯದರ್ಶಿ ದಿನೇಶ್ ಬಿ. ಕುಡ್ಡ, ಜೊತೆ ಕೋಶಾಧಿಕಾರಿ ವಿಮಲಾ ವಿ. ಶೆಟ್ಟಿ, ಲಲಿತ ಕಲಾ ವಿಭಾಗದ ವತಿಯಿಂದ ಕಾರ್ಯಾಧ್ಯಕ್ಷೆ ಸುಷ್ಮಾ ಡಿ. ಶೆಟ್ಟಿ, ಕಾರ್ಯದರ್ಶಿ ರಮೇಶ್ ವಿ. ಶೆಟ್ಟಿ, ಮಹಿಳಾ ವಿಭಾಗದ ವತಿಯಿಂದ ಕಾರ್ಯಾಧ್ಯಕ್ಷೆ ಆಶಾ ಎಲ್. ಶೆಟ್ಟಿ, ಕಾರ್ಯದರ್ಶಿ ಮಾಧುರಿಕ ಆರ್. ಬಂಗೇರ ಹಾಗೂ ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.

.

.

.



Related posts

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk

ಮುಂಬಯಿ ಕನ್ನಡ ಸಂಘ: ಡಿ. 20ರಂದು ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಶ್ರೀ ರಜಕ ಸಂಘ ಮುಂಬಯಿ – ಅ. 6ಕ್ಕೆ ವಸಯಿ ಘಟಕದಆಶ್ರಯದಲ್ಲಿ ಶಾರದ ಪೂಜೆ

Mumbai News Desk

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk

ಸ್ಪಂದನ ಯುವ ವೃಂದದ ‘ಸ್ಪಂದನ ದಶ ಸಂಭ್ರಮ-2026’: ಮೇ 3ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

Mumbai News Desk

ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk