
=============
ಮುಂಬಯಿ ಥಾಣೆ ಪಶ್ಚಿಮ ವೀರ್ ಸಾವರ್ಕರ್ ನಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏಪ್ರಿಲ್ 14ರ ಮಂಗಳವಾರದಂದು ಸಂಕ್ರಮಣ ಪೂಜೆ, ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಸೇವೆ,ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿ ಗ್ರಂಥ ಪಾರಾಯಣ (ಯಕ್ಷಗಾನ ತಾಳ ಮದ್ದಳೆ ರೂಪದಲ್ಲಿ) ಜರಗಲಿದೆ.
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಸ್ಥಾಪಕ, ಮುಖ್ಯಸ್ಥ ಹಾಗೂ ಜ್ಯೋತಿಷಿ ಶಿವಪ್ರಸಾದ್ ಪೂಜಾರಿ ಪುತ್ತೂರು ಇವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ, ಜಗದೀಶ್ ಎಸ್. ತಂತ್ರಿ, ರಘುಚಂದ್ರ ಆಚಾರ್ಯ ಕಾರಿಂಜ, ರಾಧಾಕೃಷ್ಣ ಗುರುಸ್ವಾಮಿ ಇವರುಗಳ ಶುಭಾಶೀರ್ವಾದ ಹಾಗೂ ಸಹಕಾರದೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ. ಕಾರ್ಯಕ್ರಮದಂಗವಾಗಿ
ಬೆಳಿಗ್ಗೆ ಗಂ 8 ಕ್ಕೆ ಗಣ ಹೋಮ, ಗಂ 9.30 ಕ್ಕೆ ಶ್ರೀ ಸತ್ಯ ನಾರಾಯಣ ಮಹಾ ಪೂಜೆ,
ಗಂ 11:30 ಕ್ಕೆ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಸೇವೆ, ಪಂಚಕಜ್ಜಾಯ ಸೇವೆ, ಮಧ್ಯಾಹ್ನ ಗಂ
12:30 ಕ್ಕೆ ಮಹಾ ಮಂಗಳಾರತಿ, ಅನ್ನದಾನ ಸೇವೆ ನಡೆಯಲಿದೆ. ಮಧ್ಯಾಹ್ನ ಗಂ 1.ರಿಂದ ಸಾಯಂ ಗಂ 07:30ರವರೆಗೆ ಸದಾನಂದ ಅಮೀನ್ ಇವರ ಸಹಕಾರದೊಂದಿಗೆ ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ ಇವರಿಂದ ಶ್ರೀ ಶನಿ ಗ್ರಂಥ ಪಾರಾಯಣ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರದರ್ಶನಗಳ್ಳಲಿದೆ. ಆ ಬಳಿಕ ಮಹಾ ಮಂಗಳಾರತಿ ಅನ್ನಸಂತರ್ಪಣೆ ಜರಗಲಿದೆ. ಈ ಪ್ರಯುಕ್ತ
ಭಕ್ತಭಿಮಾನಿಗಳೆಲ್ಲರೂ ಸಕುಟುಂಬ ಸಮೇತರಾಗಿ ಆಗಮಿಸಿ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಚಾಮುಂಡೇಶ್ವರಿ ಹಾಗೂ ಪರಿವಾರ ದೈವ ದೇವರ ಕೃಪೆಗೆ ಪಾತ್ರರಾಗಬೇಕಾಗಿ
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ ಮುಖ್ಯಸ್ಥರಾದ ಜ್ಯೋತಿಷಿ
ಶಿವಪ್ರಸಾದ್ ಪೂಜಾರಿ ಪುತ್ತೂರು, ಸೇರಿದಂತೆ ಕ್ಷೇತ್ರದ ಭಜನಾ ಮಂಡಳಿ, ಮಹಿಳಾ ವಿಭಾಗ, ಯುವ ವಿಭಾಗ, ಹಾಗೂ ಸರ್ವ ಸದಸ್ಯರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.




