ಮೂಲ್ಕಿ ಚಿತ್ರಾಪುವಿನ ವಿಠಲ ಬಂಗೇರ ( 80 ವರ್ಷ) ಇವರು 09-04-2026 ರಂದು ಹೃದಯಘಾತದಿಂದ ಇಹಲೋಕ ತ್ಯಜಿಸಿದರು. ಮೃತರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಮಾಜಿ ಅಧ್ಯಕ್ಷರಾಗಿ ನಿರಂತರ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮಂದಿರದ ಅಭಿವೃದ್ಧಿಗಾಗಿ ಇವರು ಶ್ರಮಿಸಿದ್ದು, ಸರ್ವರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರು ಪತ್ನಿ ಪ್ರಮೀಳಾ ವಿ. ಬಂಗೇರ, ಪುತ್ರ ಗಿರೀಶ್ ಬಂಗೇರ, ಸುನಿಲ್ ಬಂಗೇರ, ಪುತ್ರಿಯರಾದ ವನಿತಾ, ಕವಿತಾ, ಪ್ರಜ್ಞಾ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಸಂಚಾಲಕರಾದ ಚಿತ್ರಾಪು ಬಿಲ್ಲವ ಸಂಘ ಮುಂಬೈಯ ಪದಾಧಿಕಾರಿಗಳು, ಸದಸ್ಯರು, ಚಿತ್ರಾಪು ಬಿಲ್ಲವ ಭಕ್ತ ವೃಂದ ದುಬೈಯ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.




