31.6 C
Mumbai
June 8, 2026
Mumbai News Kannada
ಸುದ್ದಿ

ಚಿತ್ರಾಪು: ವಿಠಲ ಬಂಗೇರ ನಿಧನ






ಮೂಲ್ಕಿ ಚಿತ್ರಾಪುವಿನ ವಿಠಲ ಬಂಗೇರ ( 80 ವರ್ಷ) ಇವರು 09-04-2026 ರಂದು ಹೃದಯಘಾತದಿಂದ ಇಹಲೋಕ ತ್ಯಜಿಸಿದರು. ಮೃತರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಮಾಜಿ ಅಧ್ಯಕ್ಷರಾಗಿ ನಿರಂತರ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮಂದಿರದ ಅಭಿವೃದ್ಧಿಗಾಗಿ ಇವರು ಶ್ರಮಿಸಿದ್ದು, ಸರ್ವರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರು ಪತ್ನಿ ಪ್ರಮೀಳಾ ವಿ. ಬಂಗೇರ, ಪುತ್ರ ಗಿರೀಶ್ ಬಂಗೇರ, ಸುನಿಲ್ ಬಂಗೇರ, ಪುತ್ರಿಯರಾದ ವನಿತಾ, ಕವಿತಾ, ಪ್ರಜ್ಞಾ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಸಂಚಾಲಕರಾದ ಚಿತ್ರಾಪು ಬಿಲ್ಲವ ಸಂಘ ಮುಂಬೈಯ ಪದಾಧಿಕಾರಿಗಳು, ಸದಸ್ಯರು, ಚಿತ್ರಾಪು ಬಿಲ್ಲವ ಭಕ್ತ ವೃಂದ ದುಬೈಯ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ವಸಯಿ ತಾಲೂಕ ಹೋಟೆಲ್ ಎಸೋಸಿಯೇಶನಿಂದ  ಪ್ರತಿಭಟನೆ

Mumbai News Desk

ಉದ್ಯಮಿ, ಸಂಘಟಕ ಗೋಪಾಲ ಪುತ್ರನ್ ಅವರಿಗೆ ಪಿತೃ ವಿಯೋಗ

Mumbai News Desk

ಪಾಣೆಮಂಗಳೂರಲ್ಲಿ ಶ್ರೀನಿವಾಸ ಸಾಫಲ್ಯ ದಂಪತಿಗೆ ಸನ್ಮಾನ 

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ನಿಧನ

Mumbai News Desk

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, ‘ಹೀಮ್ಯಾನ್’ ಕಳೆದುಕೊಂಡ ಭಾರತೀಯ ಚಿತ್ರರಂಗ

Mumbai News Desk