
ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಕರ್ನಾಟಕ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಘಟಕ, ಕೇಶವ ಸ್ಮೃತಿ ಸಂವರ್ಧನ ಸಮಿತಿ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಸಭಾಂಗಣದಲ್ಲಿ ಜರುಗಿತು




ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೊಫೆಸರ್ ಗಣಪತಿ ಗೌಡ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಭಾರತೀಯ ಕೆ ಚೆನ್ನಯ್ಯ ಸ್ವಾಮಿ ವಹಿಸಿದ್ದರು
ಈ ಕಾರ್ಯಕ್ರಮದಲ್ಲಿ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಪ್ರಕಾಶ್ ಕೋಟ್ಯಾನ್, ಕೇಶವ ಸ್ಮೃತಿ ಸೌಹಾರ್ದನ ಸಮಿತಿಯ ಶ್ರೀ ಗಜಾನನ ಪೈ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ನ ಸಂಯೋಜಕರಾದ ಪ್ರೊಫೆಸರ್ ಡಾಕ್ಟರ ಶೇಷಪ್ಪ ಅಮೀನ್, ಉಪಸ್ಥಿದ್ದರು ಶ್ರೀಯುತ ಶೇಷಪ್ಪ ಅಮೀನ್ ಅವರು ಸ್ವಾಗತಿಸಿದರು, ಚೆನ್ನಯ್ಯ ಸ್ವಾಮಿ ಪ್ರಸ್ತಾವಿಕ ಭಾಷಣ ಮಾಡಿದರು. ಡಾಕ್ಟರ್ ಕುಸುಮ್ ಇವರು ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು ಹಾಗೂ ಮಾದಕ ದ್ರವ್ಯ ವ್ಯಸನ ಮಾಡಿ ಬಿಟ್ಟ ವ್ಯಕ್ತಿಗಳು ಬಂದು ತನ್ನ ಅನುಭವವನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಕಾಲೇಜಿನ ಎನ್ಎಸ್ಎಸ್ ನ ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಂದನಾರ್ಪಣೆ ಶ್ರೀಮತಿ ಶೈನಿ ಇವರು ನೆರವೇರಿಸಿಕೊಟ್ಟರು




