September 6, 2026
Mumbai News Kannada
ಸುದ್ದಿ

ಮಂಗಳೂರು : ಮೂಲತ್ವ ಫೌಂಡೇಶನ್ ಮತ್ತು ವಿವಿಧ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ





ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಸೇವಾ ಭಾರತಿ ಕರ್ನಾಟಕ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಘಟಕ, ಕೇಶವ ಸ್ಮೃತಿ ಸಂವರ್ಧನ ಸಮಿತಿ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಸಭಾಂಗಣದಲ್ಲಿ ಜರುಗಿತು

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೊಫೆಸರ್ ಗಣಪತಿ ಗೌಡ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಭಾರತೀಯ ಕೆ ಚೆನ್ನಯ್ಯ ಸ್ವಾಮಿ ವಹಿಸಿದ್ದರು

ಈ ಕಾರ್ಯಕ್ರಮದಲ್ಲಿ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಪ್ರಕಾಶ್ ಕೋಟ್ಯಾನ್, ಕೇಶವ ಸ್ಮೃತಿ ಸೌಹಾರ್ದನ ಸಮಿತಿಯ ಶ್ರೀ ಗಜಾನನ ಪೈ, ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ನ ಸಂಯೋಜಕರಾದ ಪ್ರೊಫೆಸರ್ ಡಾಕ್ಟರ ಶೇಷಪ್ಪ ಅಮೀನ್, ಉಪಸ್ಥಿದ್ದರು ಶ್ರೀಯುತ ಶೇಷಪ್ಪ ಅಮೀನ್ ಅವರು ಸ್ವಾಗತಿಸಿದರು, ಚೆನ್ನಯ್ಯ ಸ್ವಾಮಿ ಪ್ರಸ್ತಾವಿಕ ಭಾಷಣ ಮಾಡಿದರು. ಡಾಕ್ಟರ್ ಕುಸುಮ್ ಇವರು ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು ಹಾಗೂ ಮಾದಕ ದ್ರವ್ಯ ವ್ಯಸನ ಮಾಡಿ ಬಿಟ್ಟ ವ್ಯಕ್ತಿಗಳು ಬಂದು ತನ್ನ ಅನುಭವವನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಕಾಲೇಜಿನ ಎನ್ಎಸ್ಎಸ್ ನ ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದ ವಂದನಾರ್ಪಣೆ ಶ್ರೀಮತಿ ಶೈನಿ ಇವರು ನೆರವೇರಿಸಿಕೊಟ್ಟರು



Related posts

ಶೇಕಡಾವಾರು ಅಂಕಗಳಿಗಿಂತ ಮಗುವಿನ ನಗುವೇ ಮೇಲು: ಶೈಕ್ಷಣಿಕ ಒತ್ತಡದ ಜಗತ್ತಿಗೆ ಮುಂಬೈ ಕುಟುಂಬದ ಮಾನವೀಯ ಸಂದೇಶ

Mumbai News Desk

ಮೆಹ್ತಾ ಡಿಗ್ರಿ ಕಾಲೇಜ್ ಐರೋಲಿಯಲ್ಲಿ ಪದವಿ ಪ್ರಧಾನ ಸಮಾರಂಭ:

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ

Mumbai News Desk

ಆಯೋದ್ಯ ಶ್ರೀರಾಮ ಮಂದಿರದಲ್ಲಿ ಹರೀಶ್ ಪೂಜಾರಿ ಅವರಿಂದ ಸೇಕ್ಸೋಪೋನ್ ವಾದನ

Mumbai News Desk

ಹಿರಿಯ ಪತ್ರಕರ್ತ ಶ್ರೀಧರ್‌ ಉಚ್ಚಿಲ್‌ಗೆ ‘ಕೆಯುಡಬ್ಲ್ಯೂಜೆ’ ವಿಶೇಷ ಪ್ರಶಸ್ತಿ ಪ್ರದಾನ

Mumbai News Desk