September 6, 2026
Mumbai News Kannada
ಮುಂಬಯಿ

ನಾನಿಲ್ತಾರ್ ಅಭಿಮಾನಿ ಬಳಗ ಮುಂಡ್ಕೂರು : ನಾನಿಲ್ತಾರ್ನಲ್ಲಿ  ಸ್ನೇಹ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ





ಕಾರ್ಯಕ್ರಮದ ಯಶಸ್ವಿಗೆ ಸಮಾಜ ಬಾಂಧವರು ಸಹಕರಿಸಿ: ಹರೀಶ್ ಮೂಲ್ಯ

ಮುಂಬಯಿ: ಮುಂಬೈಯಲ್ಲಿ   ನೆಲೆಸಿರುವ ಮುಂಡ್ಕೂರು ಗ್ರಾಮದ ನಾನಿಲ್ತಾರ್ ಪರಿಸರ ಕುಲಾಲ ಸಮಾಜ ಬಾಂಧವರು ಒಗ್ಗಟ್ಟಾಗಿ ಸುಮಾರು 17 ವರ್ಷಗಳ ಹಿಂದೆ ಪ್ರಾರಂಭಿಸಿದ ನಾನಿಲ್ತಾರ್ ಅಭಿಮಾನಿ ಬಳಗ ಮುಂಡ್ಕೂರು ಮುಂಬೈಯ ಇದರ  ಆಶ್ರಯದಲ್ಲಿ ನಾನಿಲ್ತಾರ್ ಕುಲಾಲ ಸಂಘದ ಸಹಕಾರದೊಂದಿಗೆ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಾನಿಲ್ತಾರ್ ಕುಲಾಲ ಭವನದಲ್ಲಿಮೇ 5 ರಂದು  ಆಯೋಜಿಸಿಕೊಂಡಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಗೊರೆಗಾಂವ್ ಪೂರ್ವದ ಪ್ರಜ್ಞ ಶಾಲೆಯ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ  ನಾನಿಲ್ತಾರ್ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ ಮೂಲ್ಯ ಮಾತನಾಡಿ ಊರಿನಲ್ಲಿ ನಿರ್ಮಾಣಗೊಂಡಿರುವ ನಾನಿಲ್ತಾರ್ ಕುಲಾಲ ಪರಿಸರದ ಜನರಿಗೆ ಹೆಚ್ಚು ಅನುಕೂಲವಾಗುವ ಬೇಕೆನ್ನುವ ಉದ್ದೇಶದಿಂದ ಜನರೇಟರ್ ನ್ನು ನೀಡುವ ಮೂಲಕ ಮನೋರಂಜನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿಕೊಂಡಿದ್ದೇವೆ. ಈ ಕಾರ್ಯಕ್ರಮಕ್ಕೆ ಮುಂಬೈಯಲ್ಲಿರುವ ನಾನಿಲ್ತಾರ್ ಪರಿಸರದ ಕುಲಾಲ್ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿಸಿಕೊಂಡರು.

ಬಳಗದ ಸಂಚಾಲ ಕೃಷ್ಣ ಮೂಲ್ಯ ಕಾರ್ಯಕ್ರಮದ ಪೂರ್ಣ ಮಾಹಿತಿಯನ್ನು ತಿಳಿಸಿದರು. ಕಾರ್ಯದರ್ಶಿ ದಿನೇಶ್ ಬಂಗೇರ ಖಾರ್ ದಾಂಡ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.ಸಭೆಯಲ್ಲಿ ಕೋಶಾಧಿಕಾರಿ ರೋಹಿದಾಸ್ ಬಂಜನ್, ಜೊತೆ ಕಾರ್ಯದರ್ಶಿ ಲೋಕೇಶ್ ಮೂಲ್ಯ, ಜೊತೆ ಕೋಶಾಧಿಕಾರಿ ವಿಶ್ವನಾಥ್ ಕುಂದರ್, ಮತ್ತಿತರ ಮಹಿಳಾ ಸದಸ್ಯರು ಉಪಸ್ಥರಿದ್ದರು.



Related posts

ಮಲಾಡ್ ಗೋವಿಂದ್ ನಗರ್ ದ ಶ್ರೀ ಅಂಬಿಕಾ  ಮಂದಿರದಲ್ಲಿ ಭಕ್ತಿ ಸಂಭ್ರಮದ ದಸರಾ ಮಹೋತ್ಸವ

Mumbai News Desk

ಬಂಟರ ಸಂಘ ಮುಂಬಯಿ, ಮೀರಾ -ಭಾಯಂದರ್ ಪ್ರಾದೇಶಿಕ  ಸಮಿತಿ ವಾರ್ಷಿಕ ವಿದ್ಯಾರ್ಥಿ ವೇತನ, ದತ್ತು ಸ್ವೀಕಾರ, ವಿಧವಾವೇತನ, ಆರ್ಥಿಕ ನೆರವು ವಿತರಣೆ,

Mumbai News Desk

​ಮುಂಬೈನಲ್ಲಿ ಭಕ್ತಿಪೂರ್ವಕವಾಗಿ ನಡೆದ ‘ಶುಭ ಶುಕ್ರವಾರ’: ಸಾಂತಾಕ್ರೂಜ್‌ನಲ್ಲಿ ಗಮನಸೆಳೆದ ‘ಶಿಲುಬೆಯ ನೇರ ಹಾದಿ’ ನಡಿಗೆ

Mumbai News Desk

ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್  ಗೋಕುಲ  ಸಂಪನ್ನಗೊಂಡ ತಾಳಮದ್ದಳೆ ಸಪ್ತಾಹ 

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಡೊಂಬಿವಲಿ ಸ್ಥಳೀಯ ಕಛೇರಿ : ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ ಸಾಧಕರಿಗೆ ಸನ್ಮಾನ, ನೃತ್ಯ ವೈಭವ, ನಾಟಕ

Mumbai News Desk