30.6 C
Mumbai
April 23, 2026
Mumbai News Kannada
ಸುದ್ದಿ

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ





.

ಕಳೆದ ವರ್ಷದಂತೆ ಈ ವರ್ಷವೂ ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಸಾಲಿನ ವಿಧ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಇಂದು ಉಡುಪಿಯ ವುಡ್ ಲ್ಯಾಂಡ್ ಹೋಟೇಲಿನ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಶ್ರೀ ಕಿರಣ್ ದಬಾಡೆಯವರನ್ನು ಸನ್ಮಾನಿಸಲಾಯಿತು. ಪ್ರಾಧ್ಯಾಪಕರಾದ ಶ್ರೀ ಪ್ಯಾಟಿಯವರು, ಶ್ರೀ ಎಮ್.ಅರ್.ಹೆಗ್ಡೆಯವರು ಪತ್ನೀ ಸಮೇತರಾಗಿ ಉಪಸ್ಥಿತರಿದ್ದರು. ಗೌರವವನ್ನು ಸ್ವೀಕರಿಸಿದ ಪ್ರಾಧ್ಯಾಪಕರಾದ ಶ್ರೀಯುತ ಕಿರಣ್ ದಬಾಡೆಯವರು, ವ್ಯಕ್ತಿಗಳ ಸಂಬಂಧದ ಬಗ್ಗೆ ವಿವರಿಸಿ ಶುಭ ಹಾರೈಸಿದರು. ಉಪಸ್ಥಿತರಿದ್ದ ಡಾ|ಎಂ.ಆರ್.ಹೆಗಡೆಯವರು, ವ್ಯಕ್ತಿ ಸಮಾಜದಿಂದ ತುಂಬಾ ಪಡೆಯುತ್ತಾನೆ‌. ಸಮಾಜಕ್ಕೆ ತನ್ನಿಂದಾದ ಸಹಾಯ ಮಾಡುವುದು ಅವನ ಕರ್ತವ್ಯ ಎಂದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ವೆಂಕಟೇಶ್ ಪ್ಯಾಟಿಯವರು ಜೀವನದಲ್ಲಿ ಸಂತಸ ಪಡುವುದು ಮುಖ್ಯ. ಇವತ್ತಿನ ಸಭೆ ಅದನ್ನು ನೀಡಿದೆ.ಎಲ್ಲರ ಜೀವನವೂ ಸಂತಸವಾಗಿರಲೆಂದು ಹರಸಿದರು.

ಕಾರ್ಯಕ್ರಮ ಬೆಳಿಗ್ಗೆ 10 ಕ್ಕೆ ಸರಿಯಾಗಿ ಲಘು ಉಪಹಾರದೊಂದಿಗೆ ಆರಂಭವಾಯಿತು.

ಸಭಾ ಕಾರ್ಯಕ್ರಮದ ನಂತರ
ಜನಗಣಮನದೊಂದಿಗೆ ಸಭಾ ಕಾರ್ಯಕ್ರಮ ಮುಕ್ತಾಯಗೊಂಡಿತು.
ಕಾರ್ಯಕ್ರಮವನ್ನು ಉಡುಪಿಯ ಉದ್ಯಮಿ ಅಲೆವೂರು ಶ್ರೀ ನಾಗರಾಜ್ ಆಚಾರ್ಯ ರವರು ಸಂಯೋಜಿಸಿದರು. ಶ್ರೀ ಸುಧಾಕರ ಶೆಟ್ಟಿ ನಿವೃತ್ತ ಮುಖ್ಯ ಶಿಕ್ಷಕರು ಸ್ವಾಗತಿಸಿದರು. ಶ್ರೀ ಸಕು ಪಾಂಗಾಳರವರು ಕಾರ್ಯಕ್ರಮ ನಿರ್ವಹಿಸಿದರು.ಕೊನೆಯಲ್ಲಿ ಶ್ರೀ ಸೂರಪ್ಪ ಕುಂದರ್,ಮುಂಬಯಿ ಇವರು ಧನ್ಯವಾದವಿತ್ತರು.
ನಂತರ ಸ್ವಾದಿಷ್ಟಭರಿತ ವುಡ್ ಲ್ಯಾಂಡ್ ಹೋಟೇಲಿನ ಊಟದ ವ್ಯವಸ್ಥೆಯನ್ನು ಆಸ್ವಾದಿಸಿದರು.

ಕೊನೆಯಲ್ಲಿ ವಿಧ್ಯಾರ್ಥಿಗಳು ಉಡುಪಿಯ ಕುಕ್ಕಿಕಟ್ಟೆಯಲ್ಲಿರುವ
ಶ್ರೀ ಕೃಷ್ಣ ಬಾಲನಿಕೇತನ ಕ್ಕೆ ಭೇಟಿ ದೇಣಿಗೆಯನ್ನು ನೀಡಿದರು.



Related posts

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ವಾರ್ಷಿಕ ಪ್ರಶಸ್ತಿಗಳ ಪ್ರಕಟ

Mumbai News Desk

ಮುಂಬೈ : ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಸದಸ್ಯ ನಾರಾಯಣ ಉಚ್ಚಿಲ್ ನಿಧನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಬೆಂಗಳೂರು : ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ವೈರಸ್ ಪತ್ತೆ, ಆತಂಕ ಪಡುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ

Mumbai News Desk