July 22, 2026
Mumbai News Kannada
ತುಳುನಾಡು

ಹೂಡೆ : ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ 101ನೇ ಭಜನಾ ಮಂಗಳೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ವೈಭವ







.

ಹೂಡೆಯ ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ (ರಿ.) ಇದರ 101ನೇ ವರ್ಷದ ಭಜನಾ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಅತ್ಯಂತ ಶ್ರದ್ಧಾಭಕ್ತಿಯಿಂದ ಯಶಸ್ವಿಯಾಗಿ ನೆರವೇರಿತು.

ಈ ಸಂಭ್ರಮದ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಅಧಿಕ ಅಂಕಗಳನ್ನು ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸತತ ಹಲವಾರು ವರ್ಷಗಳಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸುತ್ತಾ ಸಮಾಜದ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುತ್ತಿರುವ ಶ್ರೀಮತಿ ಇಂದಿರಾ ಪಾಂಡುರಂಗ ಅಂಚನ್ ಅವರಿಗೆ ಸಂಘವು ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತಿ ಸುಧೆ ಹರಿಸಿದ ವಿವಿಧ ಭಜನಾ ಮಂಡಳಿಗಳ ಸೇವೆ ಅಪಾರವಾದುದು.ಈ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮದ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಸಂಘದ ಎಲ್ಲಾ ಸಮಿತಿ ಸದಸ್ಯರು, ಶ್ರೀ ದೇವಿ ಬಿಲ್ಲವ ಮಹಿಳಾ ಘಟಕ ಹಾಗೂ ಯುವ ಸಂಘಟನೆಯ ಸರ್ವ ಸದಸ್ಯರಿಗೆ , ಅರ್ಚಕ ವೃಂದಕ್ಕೆ ಅಧ್ಯಕ್ಷರಾದ ರತನ್ ಡಿ. ಸುವರ್ಣ ಮತ್ತು ಕಾರ್ಯದರ್ಶಿ ಸತೀಶ್ ಬಿ. ಅಂಚನ್, ಕೋಶಾಧಿಕಾರಿ ನವೀನ್ ಗುಳಿಬೆಟ್ಟು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದು, ಮುಂದೆಯೂ ಸಮಾಜ ಬಾಂಧವರ ಸಹಕಾರವನ್ನು ಕೋರಿದ್ದಾರೆ.



Related posts

ಗ್ರಾಮದ ಅಭಿವೃದ್ಧಿ ನಮ್ಮಧ್ಯೇಯವಾಗಲಿ : ಕುಸುಮಾ ಚಂದ್ರಶೇಖರ್

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮಹೂರ್ತ

Mumbai News Desk

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ

Mumbai News Desk

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ : ನವದುರ್ಗಾ ಲೇಖನ ಯಜ್ಞ ಸಂಕಲ್ಪ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಖ್ಯಾತ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲ ಭೇಟಿ

Mumbai News Desk

ಮೂಲ್ಕಿ : ವಿಜಯಾ ರೈತರ ಸೇವಾ ಸಂಘದ ಮಹಾಸಭೆ ಸದಸ್ಯರಿಗೆ ಶೇ ೧೨ ಡಿವಿಡೆಂಡ್

Mumbai News Desk