July 23, 2026
Mumbai News Kannada
ಪ್ರಕಟಣೆ

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ







.

ಉಡುಪಿ ತಾಲೂಕು, ಹೆಜಮಾಡಿ ಕೋಡಿಯ ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರದಲ್ಲಿ 108ನೇ ವಾರ್ಷಿಕ ಮಂಗಲೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಏಪ್ರಿಲ್ 21, 2026ರ ಮಂಗಳವಾರದಂದು ಬಹಳ ವಿಜೃಂಭಣೆಯಿಂದ ಜರುಗಲಿದೆ. ಅಂದು ಬೆಳಿಗ್ಗೆ 8:00 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ನವಕ ಪ್ರಧಾನ ಕಲಶ ಹೋಮ ಮತ್ತು ಪುಣ್ಯಾಹವಾಚನದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿವೆ. 9:30ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಲಿದ್ದು, ಮಧ್ಯಾಹ್ನ 12:00 ಗಂಟೆಗೆ ಮಹಾಪೂಜೆ ಹಾಗೂ ಪಲ್ಲಪೂಜೆ ನಡೆಯಲಿದೆ. ಮಧ್ಯಾಹ್ನ 12:30ರಿಂದ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.

ಮಧ್ಯಾಹ್ನ 1:00 ಗಂಟೆಗೆ ದೀಪ ಪ್ರಜ್ವಲನೆ( ಜೋಧ್‌ಪುರದ ಆರ್ಮಿ ಸಿಗ್ನಲ್ ಇಂಟೆಲಿಜೆನ್ಸ್‌ನ ಜೂನಿಯರ್ ಕಮಿಷನ್ಡ್ ಆಫೀಸರ್ ಚಂದ್ರಹಾಸ ಸಾಲಿಯಾನ್, ಮುಲ್ಕಿ ನಗರ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷ ಸತೀಶ್ ಅಂಚನ್, ಅವರಿಂದ )
ಬಳಿಕ ಸಂಕೀರ್ತನೆ ಆರಂಭಗೊಳ್ಳಲಿದೆ. ರಾತ್ರಿ 8:30ಕ್ಕೆ ಭಜನಾ ಮಂಗಳೋತ್ಸವದೊಂದಿಗೆ ಪ್ರಸಾದ ವಿತರಣೆ ನಡೆಯಲಿದ್ದು, ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀ ವಿಠೋಬ ಗೋಪಾಲಕೃಷ್ಣ ಭಜನಾ ಮಂದಿರ, ಶ್ರೀ ವಿಠೋಬ ಗೋಪಾಲಕೃಷ್ಣ ಮಹಿಳಾ ಮಂಡಳಿ ಹಾಗೂ ಶ್ರೀ ವಿಠೋಬ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರು,ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಜು. 24: ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಂಧೇರಿ ಪಶ್ಚಿಮದ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ

Mumbai News Desk

ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ, ಪೆ 18ರಂದು   ಅರಶಿನ ಕುಂಕುಮ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು – ಮಾ. 6ಕ್ಕೆ ಸ್ತನಪಾನ ಕೊಠಡಿ ಉದ್ಘಾಟನೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಪದ್ಮಶಾಲಿ ಸಮಾಜ ಸೇವಾ ಸಂಘ,ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿ, ಮಹಿಳಾ ಬಳಗ – ಸೆ. 15ಕ್ಕೆ ವಾರ್ಷಿಕ ಮಹಾಸಭೆ.

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk