30.5 C
Mumbai
June 8, 2026
Mumbai News Kannada
ತುಳುನಾಡು

ಕರ್ನಿರೆ: ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವ ಸಂಪನ್ನ





ಮೂಲ್ಕಿ: ಕಾರ್ನಿಕದ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದ ಕರ್ನಿರೆ ಗ್ರಾಮದ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವವು ಏಪ್ರಿಲ್ 09 ರಿಂದ 11 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು:

ಏಪ್ರಿಲ್ 09: ರಾತ್ರಿ ಅಗರಗುತ್ತು ಕುಟುಂಬಿಕರ ಸೇವಾರ್ಥವಾಗಿ ದೀಪಾರಾಧನೆ ಬಲಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ವಿಷ್ಣುಮೂರ್ತಿ ಕ್ರಿಕೆಟ್ ಕ್ಲಬ್ (ರಿ.) ಕರ್ನಿರೆ ಇವರ ಆಶ್ರಯದಲ್ಲಿ “ವೈರಲ್ ವೈಶಾಲಿ” ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡು ಜನಮನ ಸೆಳೆಯಿತು.

ಏಪ್ರಿಲ್ 10: ಮಧ್ಯಾಹ್ನ ಧ್ವಜಾರೋಹಣ ನೆರವೇರಿತು. ಬಳಿಕ ಮುಂಬೈ ಉದ್ಯಮಿ ಗಂಗಾಧರ ಎನ್. ಅಮೀನ್ (ಗುಲಾಬಿ ಭವನ, ಕರ್ನಿರೆ) ಇವರ ವತಿಯಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೀಪಾರಾಧನೆ ಬಲಿ ಹಾಗೂ ಭಂಡಾರ ಇಳಿಯುವ ಕಾರ್ಯಕ್ರಮ ಜರುಗಿತು.

ಏಪ್ರಿಲ್ 11: ಮಧ್ಯಾಹ್ನ ಕರ್ನಿರೆ ಪಟ್ಟೆಗುತ್ತು ದಿವಂಗತ ಐತಪ್ಪ ಪೂಜಾರಿಯವರ ಮೊಮ್ಮಗಳು ಹಾಗೂ ಕೃಷ್ಣ ಪೂಜಾರಿಯವರ ಪುತ್ರಿ ಚೇತನಾ ಕೃಷ್ಣ ಪೂಜಾರಿ ಇವರ ವತಿಯಿಂದ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಮುಂಬೈ ವಿರಾರ್‌ನ ಸಾಗರ್ ಹೋಟೆಲ್ ಮಾಲೀಕರಾದ ಶ್ರೀಮತಿ ಮತ್ತು ಶ್ರೀ ಪ್ರದೀಪ್ ಪೂಜಾರಿ ದಂಪತಿಯ ಸೇವಾರ್ಥವಾಗಿ ಅನ್ನಸಂತರ್ಪಣೆ ಜರುಗಿತು. ಅಂದು ರಾತ್ರಿ ಕ್ಷೇತ್ರದ ಪ್ರಧಾನ ಧಾರ್ಮಿಕ ವಿಧಿಯಾದ ಕಾಲಾವಧಿ ನೇಮೋತ್ಸವವು ಭಕ್ತಿ ಸೌರಭದೊಂದಿಗೆ ಸಂಪನ್ನಗೊಂಡಿತು.

:ಈ ಸಂದರ್ಭದಲ್ಲಿ ದೈವಸ್ಥಾನ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರು ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಬಿಲ್ಲವರ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ನಿರ್ದೇಶಕ ಗಂಗಾಧರ ಎನ್. ಅಮೀನ್ ಕರ್ನಿರೆ, ವಾಸುದೇವ ಶೆಟ್ಟಿ ಮಗಂದಾಡಿ, ಹರಿಶ್ಚಂದ್ರ ಶೆಟ್ಟಿ ಕರ್ನಿರೆಗುತ್ತು, ಗಣೇಶ್ ಸಾಲ್ಯಾನ್ ಅಗರಗುತ್ತು, ಜೈದೀಪ್ ಪಟ್ಟೆಗುತ್ತು, ಚಂದ್ರಶೇಖರ್ ಶೆಟ್ಟಿ ಕರ್ನಿರೆ ಹೊಸಮನೆ, ರವೀಂದ್ರ ಶೆಟ್ಟಿ ಸೇನರಬೆಟ್ಟು ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.ಅಲ್ಲದೆ, ಮಹಾರಾಷ್ಟ್ರ ಹೋಟೆಲ್ ಆಂಡ್ ರೆಸ್ಟೋರೆಂಟ್ ಫೆಡರೇಶನ್‌ನ ವಿರಾರ್ ಶಂಕರ್ ಶೆಟ್ಟಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಮಾಜಿ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬೈ ಉಪಾಧ್ಯಕ್ಷ ಪುರುಷೋತ್ತಮ್ ಎಸ್. ಕೋಟ್ಯಾನ್, ಭಾರತ್ ಬ್ಯಾಂಕಿನ ಸಿಇಒ ಮತ್ತು ಎಂ.ಡಿ. ವಿದ್ಯಾನಂದ ಕರ್ಕೇರ ಮತ್ತಿತರ ಗಣ್ಯರು ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧಪ್ರಸಾದ ಸ್ವೀಕರಿಸಿದರು.



Related posts

ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ

Mumbai News Desk

ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ “ಮೂಲ್ಕಿಯ ಕೀರ್ತಿಶೇಷ ಸಾಧಕರು” ಕೃತಿ ಬಿಡುಗಡೆ ಸಮಾರಂಭ

Mumbai News Desk

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,

Mumbai News Desk

ಮೂಲ್ಕಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ಕುಬೇವೂರು ಶ್ರೀ ಜಾರಂದಾಯ ದೇವಸ್ಥಾನದ ಅರ್ಚಕ ಶೇಖರ್ ಪೂಜಾರಿ ಅವರಿಗೆ ಗೌರವ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk