
ದಿನಾಂಕ 25-04-2026ರ ಶನಿವಾರದಂದು ಮೂಡುಶೆಡ್ಡೆಯ ಆದಿಕ್ಷೇತ್ರ ಜಾರ ಶ್ರೀ ಜಾರಂದಾಯ ದೈವಸ್ಥಾನದ ಬಳಿ ಇರುವ ಭವ್ಯ ರಂಗಮಂಟಪದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ “ಶ್ರೀ ದೇವಿ ಮಹಾತ್ಮೆ” ಎಂಬ ಯಕ್ಷಗಾನ ಬಯಲಾಟ ಸೇವೆಯು ಜರುಗಲಿದೆ. ಶೆಡ್ಡೆ, ಜಾರ ಹಾಗೂ ಊರ ಹತ್ತು ಸಮಸ್ತರು 44ನೇ ವರ್ಷದ ಸೇವೆಯಾಟವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಂದು ಸಂಜೆ 6:15ಕ್ಕೆ ಸರಿಯಾಗಿ ಶ್ರೀ ದೇವರ ಚೌಕಿ ಪೂಜೆ ನಡೆಯಲಿದ್ದು, ಸಂಜೆ 6:30ಕ್ಕೆ ಯಕ್ಷಗಾನ ಪ್ರದರ್ಶನ ಪ್ರಾರಂಭವಾಗಲಿದೆ. ಇದೇ ಸಂದರ್ಭದಲ್ಲಿ ರಾತ್ರಿ 8:30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆಯೂ ನಡೆಯಲಿದ್ದು, ಕಲಾಭಿಮಾನಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಸಂಘಟಕರು ವಿನಂತಿಸಿದ್ದಾರೆ.




