31.4 C
Mumbai
June 10, 2026
Mumbai News Kannada
ಸುದ್ದಿ

ಸಮುದಾಯದ ಮುಖಂಡ, ಸುಪ್ರೀಂ ಕೋರ್ಟ್ ವಕೀಲ ಶಶಿಧರ್ ಯು. ಕಾಪು ನಿಧನ





ಮುಂಬಯಿ ಬಿಲ್ಲವ ಸಮುದಾಯದ ಹಿರಿಯ ಮುಖಂಡರು ಹಾಗೂ ಖ್ಯಾತ ನ್ಯಾಯವಾದಿ ಶಶಿಧರ್ ಯು. ಕಾಪು (74) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ನಿಧನರಾದರು. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ಹಾಗೂ ನೋಟರಿ ಯೂನಿಯನ್ ಆಫ್ ಇಂಡಿಯಾದ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ನಿಯಮಿತದ ಮಾಜಿ ನಿರ್ದೇಶಕರಾಗಿಯೂ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಬಿಲ್ಲವರ ಅಸೋಸಿಯೇಷನ್ ಮುಂಬಯಿಯ ಹಿರಿಯ ಸದಸ್ಯರಾಗಿದ್ದ ಇವರು, ದಿವಂಗತ ಜಯ ಸಿ. ಸುವರ್ಣ ಅವರ ಆಪ್ತ ಅಭಿಮಾನಿಯಾಗಿದ್ದು ಸಮುದಾಯದ ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಪುತ್ರ, ಸೊಸೆ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇಂದು ಅಪರಾಹ್ನ 12.30ಕ್ಕೆ ಗೋರೆಗಾಂವ್ ಪೂರ್ವದ ಅವರ ಸ್ವಗೃಹದಿಂದ ಶವಯಾತ್ರೆ ಹೊರಟು, ಶಿವಧಾಮ್ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷ ಸೂರ್ಯಕಾಂತ್ ಸುವರ್ಣ, ಉಪ ಕಾರ್ಯಧ್ಯಕ್ಷ ನ್ಯಾಯವಾದಿ ಸೋಮನಾಥ್ ಬಿ ಅಮೀನ್ , ನಿರ್ದೇಶಕರುಗಳು , ಹಿರಿಯ ಅಧಿಕಾರಿಗಳು, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಹಾಗೂ ಜಯ ಸಿ. ಸುವರ್ಣ ಅಭಿಮಾನಿ ಬಳಗ, ಮುಂಬೈ ಬಿಲ್ಲವರು ಮೃತರ ಆತ್ಮಕ್ಕೆ ಸದ್ಗತಿ ಕೋರಿ ಶ್ರದ್ಧಾಂಜಲಿ ಅರ್ಪಿಸಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಏಕೈಕ ಸರ್ಕಾರೇತರ ಸಂಸ್ಥೆಯಾದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕ ಸದಸ್ಯರಾಗಿ ಮತ್ತು ಉಪಾಧ್ಯಕ್ಷರಾಗಿ ಇವರು ಸಲ್ಲಿಸಿದ ಸೇವೆ ಅಮೋಘವಾದುದು. ಸಮಿತಿಯ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳುತಿದ್ದ, ಇವರ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕ ತೋನ್ಸೆ ಜಯಕೃಷ್ಣ ಎ ಶೆಟ್ಟಿ, ಗೌರವಾಧ್ಯಕ್ಷ ಡಾ. ಬಿ ಎಂ ಹೆಗ್ಡೆ, ಅಧ್ಯಕ್ಷ ನಿತ್ಯಾನಂದ ಡಿ ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕುರು ಸುರೇಂದ್ರ ಸಾಲಿಯನ್, ಗೌರವ ಪ್ರಧಾನ ಕೋಶಾಧಿಕಾರಿ ಕಲ್ಯಾಣಪುರ ಸದಾನಂದ ಆಚಾರ್ಯ ಹಾಗೂ ಸಮಿತಿಯ ಉಪಾಧ್ಯಕ್ಷರುಗಳು, ಮಾಜಿ ಅಧ್ಯಕ್ಷರುಗಳು, ಸಲಹೆಗಾರರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಸಮಿತಿಯ ಕಾರ್ಯಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ರಾಜ್ಯ ಸಂಯೋಜಕ ಜಗಧೀಶ್ ಅಧಿಕಾರಿ, ಉಪ ಕಾರ್ಯಧ್ಯಕ್ಷರುಗಳು, ಜಿಲ್ಲಾ ಕಾರ್ಯದರ್ಶಿಗಳಾದ ಜಿ. ಟಿ. ಆಚಾರ್ಯ, ಸುರೇಂದ್ರ ಮೆಂಡನ್, ಕೋಶಾಧಿಕಾರಿ ಪ್ರಭಾಕರ್ ಬಂಗೇರ ಕಾರ್ಕಳ, ಪದಾಧಿಕಾರಿಗಳು ಮತ್ತು ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿ, ಕರಾವಳಿಯ ಅಭಿವೃದ್ಧಿ ಮತ್ತು ಸಮುದಾಯದ ಧ್ವನಿಯಾಗಿದ್ದ ಒಬ್ಬ ದಕ್ಷ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಗಣ್ಯರು ಕಂಬನಿ ಮಿಡಿದಿದ್ದಾರೆ.



Related posts

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

ಇರಾನ್-ಅಮೆರಿಕ ಮಹಾಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಜಾಗತಿಕ ತಲ್ಲಣದ ನಡುವೆ ಶಾಂತಿ ಮಾತುಕತೆಗೆ ಉಭಯ ದೇಶಗಳ ಸಮ್ಮತಿ

Mumbai News Desk

ಅಂಚೆ ಜನ ಸಂಪರ್ಕ ಅಭಿಯಾನ: ಕಂಬದ ಕೋಣೆ- ಕಾಲ್ತೊಡು

Mumbai News Desk