July 27, 2026
Mumbai News Kannada
ಸುದ್ದಿ

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ







ಉಡುಪಿಯ ನಗರ ಬಸ್ ನಿಲ್ದಾಣದ ಬಳಿ ಇರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಭಾನುವಾರ ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಸಂಕೀರ್ಣದಲ್ಲಿದ್ದ ಮೊಬೈಲ್ ಮೌತ್ತು ಹಾರ್ಡ್‌ವೇರ್ ಮಳಿಗೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.

ಪ್ರಾಥಮಿಕ ವರದಿಗಳ ಪ್ರಕಾರ, ನೆಲ ಅಂತಸ್ತಿನಲ್ಲಿರುವ ಮೊಬೈಲ್ ಮಾರಾಟ ಮತ್ತು ಸೇವಾ ಕೇಂದ್ರದಲ್ಲಿ ಮೊದಲು ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಿದ್ದಂತೆಯೇ ಪಕ್ಕದ ಹಾರ್ಡ್‌ವೇರ್ ಅಂಗಡಿಗೂ ವ್ಯಾಪಿಸಿದೆ. ಕೆಲವೇ ನಿಮಿಷಗಳಲ್ಲಿ ಇಡೀ ಕಟ್ಟಡವನ್ನೇ ಬೆಂಕಿ ಆವರಿಸಿಕೊಂಡಿದ್ದು, ಮಳಿಗೆಯಲ್ಲಿದ್ದ ದುಬಾರಿ ಬೆಲೆಯ ಮೊಬೈಲ್ ಫೋನ್‌ಗಳು, ಬಿಡಿಭಾಗಗಳು ಮತ್ತು ಹಾರ್ಡ್‌ವೇರ್ ಸಾಮಗ್ರಿಗಳು ಬೆಂಕಿಯ ಜ್ವಾಲೆಗೆ ಸಿಲುಕಿ ಭಸ್ಮವಾಗಿವೆ ಎಂದು ವರದಿಯಾಗಿದೆ. .ಘಟನೆ ನಡೆದ ತಕ್ಷಣ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯ ಜನರು ಜಮಾಯಿಸಿದ್ದು, ಈ ಅಗ್ನಿ ಅವಘಡದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸ್ಥಳದಲ್ಲಿ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



Related posts

ಉಡುಪಿ: ಬಜೆ ಮೊಗವೀರ ಸುವರ್ಣ ಮೂಲಸ್ಥಾನದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಮುಂಬೈ : ಶ್ರೇಯಸ್ ಆರ್ ಪೂಜಾರಿ ಗೆ Jee Main ನಲ್ಲಿ ಶೇ. 99.36, ಎಚ್ ಎಸ್ ಸಿ ಯಲ್ಲಿ ಶೇ.89 ಅಂಕ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಬೆಂಗಳೂರು – ಮುಂಬೈ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ: ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ಸೇವೆ

Mumbai News Desk