29.7 C
Mumbai
June 22, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್‌ ನ ಗೋರೆಗಾಂವ್ ಶಾಖೆಯ ಗಣೇಶ್ ಪೂಜಾರಿ ಸೇವಾ ನಿವೃತ್ತಿ





ಮುಂಬಯಿ : ಭಾರತ್ ಬ್ಯಾಂಕ್‌ ನಲ್ಲಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದ ಗಣೇಶ್ ಕೆ. ಪೂಜಾರಿ ಅವರು 2026ರ ಏಪ್ರಿಲ್ 30ರಂದು ನಿವೃತ್ತರಾದರು. ನಿವೃತ್ತಿ ಸಂದರ್ಭದಲ್ಲಿ ಭಾರತ್ ಬ್ಯಾಂಕಿನ ಗೋರೆಗಾಂವ್ ಪೂರ್ವ ಶಾಖೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಸೇವಾ ಅವಧಿಯಲ್ಲಿ ಗಣೇಶ್ ಕೆ. ಪೂಜಾರಿ ಅವರು ಬ್ಯಾಂಕಿನ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದು, ಸಹೋದ್ಯೋಗಿಗಳು ಹಾಗೂ ಗ್ರಾಹಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಕರ್ತವ್ಯನಿಷ್ಠೆ, ಸರಳತೆ ಹಾಗೂ ಸ್ನೇಹಪರ ವ್ಯಕ್ತಿತ್ವ ಎಲ್ಲರಿಗೂ ಆದರ್ಶವಾಗಿತ್ತು.

ಈ ಸಂದರ್ಭದಲ್ಲಿ ಶಾಖೆಯ ವ್ಯವಸ್ಥಾಪಕರಾದ ಸಂತೋಷ್ ಎಸ್ ಸಾಲ್ಯಾನ್ ಹಾಗೂ ಸಹಾಯಕ ವ್ಯವಸ್ಥಾಪಕರಾದ ಜಯಲಕ್ಷ್ಮಿ ತೋನ್ಸೆ ಅವರು ಗಣೇಶ್ ಪೂಜಾರಿ ಅವರ ಸೇವೆಯನ್ನು ಶ್ಲಾಘಿಸಿ, ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಅವರ ಪತ್ನಿ ಲೀಲಾ ಗಣೇಶ್ ಪೂಜಾರಿ ಹಾಗೂ ಪುತ್ರಿಯರಾದ ತೀಶಾ ಗಣೇಶ್ ಪೂಜಾರಿ ಮತ್ತು ಲೀಶಾ ಗಣೇಶ್ ಪೂಜಾರಿ ಉಪಸ್ಥಿತರಿದ್ದು, ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಗಣೇಶ್ ಪೂಜಾರಿ ಅವರ ಮುಂದಿನ ಜೀವನ ಸುಖ, ಶಾಂತಿ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಹಾರೈಸಿದರು.ಸಮಾಜ ಸೇವಕರೂ ಆದ ಇವರು ಜಯಸುವರ್ಣ ಅಭಿಮಾನಿ ಬಳಗದಲ್ಲಿ ಕ್ರೀಯಾಶೀಲರಾಗಿದ್ದಾರೆ.

ಭಾರತ್ ಬ್ಯಾಂಕ್‌ ನ ಕಾರ್ಯಾಧ್ಯಕ್ಷ ಹಾಗೂ ಬಿಲ್ಲವ ಮಹಾಮಂಡಲದ ಅಧ್ಯಕ್ಷರೂ ಆದ ಸೂರ್ಯಕಾಂತ್ ಜಯ ಸುವರ್ಣ, ಬ್ಯಾಂಕಿನ ಉಪಕಾರ್ಯಾಧ್ಯಕ್ಷ ಸೋಮನಾಥ ಅಮೀನ್, ನಾರಾಯಣ ಗುರು ಭಜನಾ ಮಂಡಳಿಯ ಅಧ್ಯಕ್ಷ ಅಶೋಕ್ ಸಸಿಹಿತ್ತ್ಲು, ಬ್ಯಾಂಕಿನ ಸಹೋದ್ಯೋಗಿಗಳು ಇವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.B. Dinesh KulalMob.: 9821868674



Related posts

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Mumbai News Desk

ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ : ಹೊಸ ರಥ ನಿರ್ಮಾಣ, ಅಷ್ಟಮಂಗಳ ಪ್ರಶ್ನೆಗೆ ಶೀಘ್ರ ನಿರ್ಧಾರ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.

Mumbai News Desk

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk

ಶ್ರೀ ಲಕ್ಕಮ್ಮಾ ದೇವಿ ಕಲಾ ಪೋಷಕ ಸಂಘ (ರಿ) ಬ್ಯಾಕೂಡ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk