May 9, 2026
Mumbai News Kannada
ತುಳುನಾಡು

ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ  ಕ್ರಿಕೆಟ್ ಪಂದ್ಯಾಕೂಟ : ಶಾಲೆಗೆ ರೂಪಾಯಿ 1,67,875/ ಹಸ್ತಾಂತರ.





 ಉಡುಪಿ :ಇನ್ನಂಜೆ ಫ್ರೆಂಡ್ಸ್ ಇನ್ನಂಜೆ ಇವರ ಆಶ್ರಯದಲ್ಲಿ ಹಳೆ ವಿದ್ಯಾರ್ಥಿ ಹಾಗೂ ದಾನಿಗಳ ಸಹಕಾರದಲ್ಲಿ ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಇನ್ನಂಜೆ ಮೈದಾನದಲ್ಲಿ ಇನ್ನಂಜೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಿ, ಅದರಲ್ಲಿ ಉಳಿದ ಮೊತ್ತ 1,67,875 ವನ್ನು ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ನಟರಾಜ್ ಉಪಾಧ್ಯಾಯ, ದೈಹಿಕ ಶಿಕ್ಷಕರಾದ ನವೀನ್ ಶೆಟ್ಟಿ, ಅಧ್ಯಾಪಕಿಯಾದ ಶಶಿಕಲಾ ಆಚಾರ್ಯ ಇವರಿಗೆ ಹಸ್ತಾಂತರಿಸಲಾಯಿತು. 

   ಈ ಸಂದರ್ಭದಲ್ಲಿ ಇನ್ನಂಜೆ ಫ್ರೆಂಡ್ಸ್  ಇದರ ಸದಸ್ಯರುಗಳಾದ ದಿವೇಶ್ ಶೆಟ್ಟಿ, ರಾಜೇಶ್ ಕುಲಾಲ್,ಅನಿರುದ್ಧ, ಪ್ರಶಾಂತ್ ಆಚಾರ್ಯ, ವಿಕೇಶ್ ಶೆಟ್ಟಿ, ನಾಗೇಶ್ ಆಚಾರ್ಯ, ಪ್ರಥಮ್ ಆಚಾರ್ಯ, ನಿತೇಶ್ ಆಚಾರ್ಯ, ಸಚಿನ್ ಅಮೀನ್, ಪವನ್ ಕುಲಾಲ್, ಸಂದೀಪ್ ಅಜೀಲಕಾಡು, ಸಂದೀಪ್ ಆಚಾರ್ಯ,ಗಣೇಶ್ ಆಚಾರ್ಯ , ರವಿ ಪ್ರಸಾದ್, ನೀಲೇಶ್ ಶೆಟ್ಟಿ, ಕೃಷ್ಣ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು..

2025-26 ಸಾಲಿನ ಇನ್ನಂಜೆ ಶಾಲೆಯ 10ನೇ ತರಗತಿ ಫಲಿತಾಂಶ ಕನ್ನಡ ಮಾಧ್ಯಮ ಮತ್ತು ಆಂಗ್ಲಮಾಧ್ಯಮ ಶೇಕಡಾ 100 ಫಲಿತಾಂಶ ಲಭಿಸಿದೆ. 
ಈ ಸಂದರ್ಭದಲ್ಲಿ ಮಾತನಾಡಿದ 
ಇನ್ನಂಜೆ ಫ್ರೆಂಡ್ಸ್ ದಿವೇಶ್ ಶೆಟ್ಟಿ ಒಂದು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಊರ ಪರ – ಊರ ದಾನಿಗಳಿಗೆ, ನಮ್ಮನ್ನು ಪ್ರೋತ್ಸಾಹಿಸಿದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ, ಕಾರ್ಯಕ್ರಮದ ಯಶಸ್ಸಿಗೆ ಬೆನ್ನುಲುಬಾದಂತಹ ನನ್ನೆಲ್ಲಾ ಸಂಘಟಕ ಮಿತ್ರರಿಗೆ, ಶಿಸ್ತುಬದ್ಧವಾಗಿ ಹಾಗೂ ಸಂಯಮದಿಂದ ವರ್ತಿಸಿದ ಕ್ರೀಡಾಪಟುಗಳಿಗೆ, ಕ್ರೀಡಾಭಿಮಾನಿಗಳಿಗೆ , ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ತುಂಬು ಹೃದಯದ ಕೃತಜ್ಞತೆಗಳನ್ನು ತಿಳಿಸಿದರು.



Related posts

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ಮತ್ತು ರಂಗಚಾವಡಿ ರಜತ ಸಂಭ್ರಮ: ನವೀನ್ ಡಿ. ಪಡೀಲ್ ಅವರಿಗೆ ‘ರಂಗಚಾವಡಿ ಪ್ರಶಸ್ತಿ’ ಪ್ರದಾನ

Mumbai News Desk

ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಚಾಲನೆ

Mumbai News Desk

ಉಡುಪಿ ಉಚ್ಚಿಲ ದಸರಾ-2025: ಮೊಗವೀರರ ಶಕ್ತಿ ಕೇಂದ್ರದಲ್ಲಿ ವೈಭವದ ‘ದಸರಾ ಸಮಾಪನ’

Mumbai News Desk

ಮುದ್ರಾಡಿ ಪ್ರೌಢಶಾಲೆ: ಉತ್ತಮ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗೌರವ , ನಿವೃತ್ತ ಮುಖ್ಯ ಶಿಕ್ಷಕಿಗೆ ಸಮ್ಮಾನ

Mumbai News Desk

ಮೂಲ್ಕಿ: ಪೂಂಜಾ ಚಾರಿಟೇಬಲ್ ಟ್ರಸ್ಟ್‌ನಿಂದ ಅಸಹಾಯಕರಿಗೆ ಚಿಕಿತ್ಸೆಗೆ ನೆರವು

Mumbai News Desk