33 C
Mumbai
May 13, 2026
Mumbai News Kannada
ಪ್ರಕಟಣೆ

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ





ಮುಂಬಯಿಯ ಪತ್ರಕರ್ತ ಸುಭಾಷ್ ಶಿರಿಯ ಅವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘ ಬೆಂಗಳೂರು, ಇದರ ಸಹಯೋಗದಲ್ಲಿ ನೀಡುತ್ತಿರುವ 2026 ನೇ ವರ್ಷದ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಮೇ 16ರಂದು ಕಾಸರಗೋಡಿನ ಜಿಲ್ಲೆಯ ಕುಡಾಲ್ ಮೇರ್ಕಳ, ಸುಬ್ಬಯ್ಯ ಕಟ್ಟೆ, ಕಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ನಡೆಯಲಿರುವ ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಹಾಗೂ ಕನ್ನಡ ಸಾಂಸ್ಕೃತಿಕ ಉತ್ಸವ 2026 ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು. ಬೆಳಿಗ್ಗೆ ಶೋಭಾಯಾತ್ರೆಯೊಂದಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಪ್ರಾರಂಭಗೊಳ್ಳಲಿದ್ದು, ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವರಾದ ಮಾನ್ಯ ಶ್ರೀ ಎನ್ ಎಸ್ ಭೋಸರಾಜು ಅವರು ಉದ್ಘಾಟಿಸಲಿದ್ದು. ಶ್ರೀಮದ್ ಎಡನೀರು ಮಠ ಕಾಸರಗೋಡಿನ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ವಿಧಾನ ಸಭೆಯ ಉಪ ಸಭಾಧ್ಯಕ್ಷರಾದ ಮಾನ್ಯ ಶ್ರೀ ರುದ್ರಪ್ಪ ಲಮಾಣಿ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರದ ಶಾಸಕ ಎಂ ಕೆ ಎಂ ಅಶ್ರಫ್ ಅವರು ವಯಸ್ಸಲ್ಲಿದ್ದಾರೆ. ಮಾತ್ರವಲ್ಲದೆ ಈ ಸಂದರ್ಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರದ ಅಧ್ಯಕ್ಷ ಶ್ರೀ ಸೋಮಣ್ಣ ಬೇವಿನಮರದ, ಕರ್ನಾಟಕದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಾನ್ಯ ಕೆ ವಿ ಪ್ರಭಾಕರ್, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶ್ರೀ ಟಿಎಂ ಶಾಹಿದ್ ಅವರು ಅತಿಥಿಗಳಾಗಿ ಭಾಗವಹಿಸಲಿರುವರು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಉಪಸ್ಥಿತರಿರುವರು ಮಾತ್ರವಲ್ಲದೆ ವಿವಿಧ ಸಾಧಕರನ್ನು ಗೌರವಿಸಲಿದ್ದು ಹಾಗೂ ನಾಡಿನ ಹೆಸರಾಂತ ಪತ್ರಕರ್ತರನ್ನು ಗುರುತಿಸಿ ವಿವಿಧ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಕರ್ನಾಟಕದ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಾಂಸ್ಕೃತಿಕ ತಂಡಗಳಿಂದ ಜಾನಪದ ವೈವಿಧ್ಯಗಳು ನಡೆಯಲಿರುವುದು.



Related posts

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk

ಜ.5 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಇದರ 11ನೇ ವರ್ಷದ ಅಯ್ಯಪ್ಪ ಸ್ವಾಮಿಯ ಪಡಿ ಪೂಜೆ ಮತ್ತು ಮಹಾಪೂಜೆ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.

Mumbai News Desk

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸೆ. 27 ರಂದು ನವರಾತ್ರಿ ಉತ್ಸವ .ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk

ದೊಡ್ಡಣ್ಣ ಗುಡ್ಡೆಯ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಮೇ 9 ರಿಂದ ಮೇ 13 ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk