30 C
Mumbai
September 1, 2026
Mumbai News Kannada
ಕರ್ನಾಟಕ

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ. ಆರ್. ಪ್ರತಿಭಾ ಅಧಿಕಾರ ಸ್ವೀಕಾರ: ಜನಪರ ಆಡಳಿತಕ್ಕೆ ಸಂಕಲ್ಪ





ಬೆಂಗಳೂರು ಮತ್ತು ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಆರ್. ಪ್ರತಿಭಾ ಅವರನ್ನು ರಾಜ್ಯ ಸರ್ಕಾರವು ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ವರ್ಗಾಯಿಸಿದ್ದು, ಅವರು ಮೇ 30ರ ಶನಿವಾರದಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ . ಮೂಲತಃ ತುಮಕೂರು ಜಿಲ್ಲೆಯವರಾದ ಡಾ. ಪ್ರತಿಭಾ ಅವರು ಈ ಹಿಂದೆ ಮಾಗಡಿ, ಕಾರ್ಕಳ ಹಾಗೂ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ತಹಶೀಲ್ದಾರ್ ಆಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಸುದೀರ್ಘ ಅನುಭವ ಹೊಂದಿದ್ದಾರೆ. ಸಾಹಿತ್ಯ, ಕನ್ನಡಾಭಿಮಾನ ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಸದಾ ಸಕ್ರಿಯರಾಗಿರುವ ಇವರ ಜನಪರ ಆಡಳಿತ ಸೇವೆಯನ್ನು ಗುರುತಿಸಿ 2025ರ ಸಾಲಿನ ಪ್ರತಿಷ್ಠಿತ ‘ವೀರ ಕನ್ನಡ್ತಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಧಿಕಾರ ಸ್ವೀಕರಿಸಿದ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ನೂತನ ತಹಶೀಲ್ದಾರ್, ಸಾಗರ ತಾಲೂಕಿನ ಸಾರ್ವಜನಿಕರು ಹಾಗೂ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಪ್ರತಿಯೊಬ್ಬರಿಗೂ ಜನಪರ ಕಾಳಜಿಯ ಹಾಗೂ ಪಾರದರ್ಶಕ ಆಡಳಿತವನ್ನು ನೀಡುವ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸುವುದಾಗಿ ಅವರು ಈ ಸಂದರ್ಭದಲ್ಲಿ ದೃಢವಾಗಿ ತಿಳಿಸಿದ್ದಾರೆ.



Related posts

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಶಾಂಕ್ ಎಸ್ ಶೆಟ್ಟಿಗೆ ಶೇಕಡಾ 97 ಅಂಕ

Mumbai News Desk

ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.

Mumbai News Desk

ಬಿಲ್ಲವ, ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅನಿತಾ ಕಾಸರಗೋಡು ಬಂಧನ

Mumbai News Desk

ಬಳ್ಳಾರಿ : ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Mumbai News Desk