July 18, 2026
Mumbai News Kannada
ಕರ್ನಾಟಕ

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ. ಆರ್. ಪ್ರತಿಭಾ ಅಧಿಕಾರ ಸ್ವೀಕಾರ: ಜನಪರ ಆಡಳಿತಕ್ಕೆ ಸಂಕಲ್ಪ







ಬೆಂಗಳೂರು ಮತ್ತು ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಆರ್. ಪ್ರತಿಭಾ ಅವರನ್ನು ರಾಜ್ಯ ಸರ್ಕಾರವು ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ವರ್ಗಾಯಿಸಿದ್ದು, ಅವರು ಮೇ 30ರ ಶನಿವಾರದಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ . ಮೂಲತಃ ತುಮಕೂರು ಜಿಲ್ಲೆಯವರಾದ ಡಾ. ಪ್ರತಿಭಾ ಅವರು ಈ ಹಿಂದೆ ಮಾಗಡಿ, ಕಾರ್ಕಳ ಹಾಗೂ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ತಹಶೀಲ್ದಾರ್ ಆಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಸುದೀರ್ಘ ಅನುಭವ ಹೊಂದಿದ್ದಾರೆ. ಸಾಹಿತ್ಯ, ಕನ್ನಡಾಭಿಮಾನ ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಸದಾ ಸಕ್ರಿಯರಾಗಿರುವ ಇವರ ಜನಪರ ಆಡಳಿತ ಸೇವೆಯನ್ನು ಗುರುತಿಸಿ 2025ರ ಸಾಲಿನ ಪ್ರತಿಷ್ಠಿತ ‘ವೀರ ಕನ್ನಡ್ತಿ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಧಿಕಾರ ಸ್ವೀಕರಿಸಿದ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ನೂತನ ತಹಶೀಲ್ದಾರ್, ಸಾಗರ ತಾಲೂಕಿನ ಸಾರ್ವಜನಿಕರು ಹಾಗೂ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಪ್ರತಿಯೊಬ್ಬರಿಗೂ ಜನಪರ ಕಾಳಜಿಯ ಹಾಗೂ ಪಾರದರ್ಶಕ ಆಡಳಿತವನ್ನು ನೀಡುವ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸುವುದಾಗಿ ಅವರು ಈ ಸಂದರ್ಭದಲ್ಲಿ ದೃಢವಾಗಿ ತಿಳಿಸಿದ್ದಾರೆ.



Related posts

ತಾಯಿಯ ಅಗಲಿಕೆಯ ನೋವಿನಲ್ಲೂ ಅಪ್ರತಿಮ ಸಾಧನೆ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಕಾಲೇಜಿನ ದಿಶಾ

Mumbai News Desk

ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ವಿಧಾನಸಭಾ ಸದಸ್ಯತ್ವ ರದ್ದು,

Mumbai News Desk

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಕರ್ನಾಟಕ : ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Mumbai News Desk

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಶಾಂಕ್ ಎಸ್ ಶೆಟ್ಟಿಗೆ ಶೇಕಡಾ 97 ಅಂಕ

Mumbai News Desk