35 C
Mumbai
June 1, 2026
Mumbai News Kannada
ತುಳುನಾಡು

ಸಸಿಹಿತ್ಲು: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಸಾಧಕರಾಗಿ – ವೇದಪ್ರಕಾಶ್ ಎಂ. ಶ್ರೀಯಾನ್






​ಮುಲ್ಕಿ: ಸಸಿಹಿತ್ಲು ಕದಿಕೆ ಮೊಗವೀರ ಮಹಾಸಭಾ, ಮುಂಬೈ ಮೊಗವೀರ ಸಭಾ ಹಾಗೂ ಅಂಗಸಂಸ್ಥೆಯಾದ ಕದಿಕೆ ವಿದ್ಯಾಪ್ರಸಾರಕ ಸಂಘದ ವತಿಯಿಂದ ಶನಿವಾರ ಸಸಿಹಿತ್ತು ಗ್ರಾಮದ 117 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ಹಾಗೂ ಲ್ಯಾಪ್ಟಾಪ್ ವಿತರಣಾ ಕಾರ್ಯಕ್ರಮ ನಡೆಯಿತು.
​ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮುಂಬೈನ ಉದ್ಯಮಿ ವೇದಪ್ರಕಾಶ್‌ ಎಂ. ಶ್ರೀಯಾನ್ ಮಾತನಾಡಿ, “ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಗ್ರಾಮ ಹಾಗೂ ದೇಶದ ಉತ್ತಮ ಪ್ರಜೆಗಳಾಗಬೇಕು” ಎಂದರು. ಮತ್ತೊಬ್ಬ ಮುಖ್ಯ ಅತಿಥಿ, ಮುಲ್ಕಿ ವಿಜಯ ಕಾಲೇಜಿನ ಉಪನ್ಯಾಸಕಿ ಕಾತ್ಯಾಯಿನಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕದಿಕೆ ಮೊಗವೀರ ಮಹಾಸಭೆಯ ಅಧ್ಯಕ್ಷ ಗಿರೀಶ್‌ ಶ್ರೀಯಾನ್ ವಹಿಸಿದ್ದರು.
​ವೇದಿಕೆಯಲ್ಲಿ ಗುರಿಕಾರರಾದ ಕಿಶೋರ್ ಗುರಿಕಾರ, ಪೂಜಾರಿಗಳಾದ ದಿನೇಶ್ ಪೂಜಾರಿ ಹಾಗೂ ಆನಂದ ಪೂಜಾರಿ, ಅಂಗಸಂಸ್ಥೆಗಳ ಅಧ್ಯಕ್ಷರಾದ ಡಾ. ವಿ.ಕೆ. ಯಾದವ್‌ ಮತ್ತು ಪ್ರೇಮನಾಥ್‌ ಸುವರ್ಣ, ಮಹಿಳಾ ಸಭಾದ ಕಾರ್ಯದರ್ಶಿ ಪ್ರಭಾವತಿ, ಮುಂಬೈನ ಉದ್ಯಮಿ ಜಯಂತಿ ಬಾಬು ಬಂಗೇರ, ಕದಿಕೆ ಮೊಗವೀರ ಮಹಾಸಭೆಯ ಉಪಾಧ್ಯಕ್ಷ ಶೋಭೇಂದ್ರ ಸಾಲ್ಯಾನ್, ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಹಿರಿಯ ಸದಸ್ಯ ಅರವಿಂದ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
​ವಿದ್ಯಾಪ್ರಸಾರಕ ಸಂಘದ ಅಧ್ಯಕ್ಷ ಡಾ. ವಿ.ಕೆ. ಯಾದವ್ ಸ್ವಾಗತಿಸಿದರು. ಕಾರ್ಯದರ್ಶಿ ಅನಿಲ್ ಕುಂದ‌ರ್ ಧನ್ಯವಾದ ಅರ್ಪಿಸಿದರು. ಮೊಗವೀರ ಮಹಾಸಭೆಯ ಉಪಾಧ್ಯಕ್ಷ ವಿನೋದ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.



Related posts

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ಜುಲೈ. 28ಕ್ಕೆ ಆಟಿದ ಮದಿಪು

Mumbai News Desk

“ಉಡುಪಿ ಆಂಥೆಮ್” ಉಡುಪಿ ಬಗ್ಗೆ ಸುಂದರ ಗೀತೆಯ ವಿಡಿಯೋ ಬಿಡುಗಡೆ

Mumbai News Desk

ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಭವ್ಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಬಿಲ್ಲವ ಸಮಾಜದ ಸಿದ್ಧತೆ

Mumbai News Desk

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ

Mumbai News Desk