September 6, 2026
Mumbai News Kannada
ಸುದ್ದಿ

ದೆಹಲಿ ಹೋಟೆಲ್ ಅಗ್ನಿ ದುರಂತ: 21 ಜನ ದುರ್ಮರಣ





ದೆಹಲಿಯ ಮಾಳವೀಯ ನಗರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಹೋಟೆಲ್ ಅಗ್ನಿ ದುರಂತದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಮೃತರ ಪೈಕಿ ಹೆಚ್ಚಿನವರು ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತದ ಸುದ್ದಿ ತಿಳಿಯುತ್ತಿದ್ದಂತೆ ದೆಹಲಿ ಶಿಕ್ಷಣ ಸಚಿವ ಆಶಿಶ್ ಸೂದ್ ಅವರು ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿರುವ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳೀಯರು ಕೂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಬುಧವಾರ ಬೆಳಿಗ್ಗೆ ಸುಮಾರು 8:50 ರ ಸುಮಾರಿಗೆ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೋಟೆಲ್‌ನಲ್ಲಿದ್ದ 40 ಕ್ಕೂ ಹೆಚ್ಚು ಜನರನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರನ್ನೂ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಧ್ಯ ಏಷ್ಯಾ ಮತ್ತು ಆಫ್ರಿಕಾ ಖಂಡದ ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾಗಿದ್ದು, ತನಿಖೆ ಮುಂದುವರಿದಿದೆ.
ಈ ಭೀಕರ ದುರಂತಕ್ಕೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರ ಧನವನ್ನು ಘೋಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.



Related posts

ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಪ್ರದೀಪ್ ಅತ್ತಾವರ ಆಯ್ಕೆ

Mumbai News Desk

ಕಲಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಇದರ ಮಹಿಳಾ ವಿಭಾಗದ ಹರಸಿನ ಕುಂಕುಮ ಕಾಯ೯ಕ್ರಮ.

Mumbai News Desk

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ

Mumbai News Desk

ಶತಾಯುಷಿ,ಗಂಜಿಮಠ ಶಿವಣ್ಣ ಆಚಾರ್ಯ ನಿಧನ

Mumbai News Desk

ಬೊಂಡಾಲ ಬಯಲಾಟ ಸುವರ್ಣ ಸಂಭ್ರಮ ಕರೆಯೋಲೆ ಬಿಡುಗಡೆ

Mumbai News Desk