September 6, 2026
Mumbai News Kannada
ಮುಂಬಯಿ

ಶ್ರೀ ನಾರಾಯಣ ಗುರು ಭಜನಾ ಮಂಡಳಿ ಸಾಂತಾಕ್ರೂಜ್ ಘಟಕದಿಂದ ಕಲಿನಾ ಭಗವತಿ ದೇವಸ್ಥಾನದಲ್ಲಿ ಭಜನೆ






​ಮುಂಬಯಿ: ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಸಾಂತಾಕ್ರೂಜ್ ಘಟಕದ ವತಿಯಿಂದ ಮೇ 30 ರಂದು ಕಲಿನಾದ ಭಗವತಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನ ಕಾರ್ಯಕ್ರಮ ಜರುಗಿತು. ಘಟಕದ ಕಾರ್ಯಾಧ್ಯಕ್ಷರಾದ ರವೀಂದ್ರ ಶಾಂತಿ, ಮಂಡಳಿಯ ಗೌರವಾನ್ವಿತ ಪ್ರಧಾನ ಕಾರ್ಯದರ್ಶಿ ಕೇಶವ್ ಪೂಜಾರಿ ಮತ್ತು ಕೋಶಾಧಿಕಾರಿ ಮಹೇಶ್ ಕಾರ್ಕಳ ಇವರುಗಳ ಮುಂದಾಳತ್ವದಲ್ಲಿ ಈ ಭಜನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
​ಸಾಂತಾಕ್ರೂಜ್ ಘಟಕದ ಈ ಪ್ರಥಮ ಭಜನಾ ಸಂಕೀರ್ತನವನ್ನು ಭಗವತಿ ಕ್ಷೇತ್ರದ ಮೊಕ್ತೇಸರರಾದ ಕುಮಾರ್ ಸ್ವಾಮಿ, ಭಾರತ್ ಬ್ಯಾಂಕ್ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ, ನಿರ್ದೇಶಕರುಗಳಾದ ಗಂಗಾಧರ್ ಜೆ. ಪೂಜಾರಿ ಹಾಗೂ ಮೋಹನ್ ಜಿ. ಪೂಜಾರಿ ಮತ್ತು ಬಿಜೆಪಿ ಕರ್ನಾಟಕ ಸೆಲ್‌ನ ಅಧ್ಯಕ್ಷರಾದ ಶೈಲೇಂದ್ರ ಸುವರ್ಣ ಅವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.


​ಈ ಸಂದರ್ಭದಲ್ಲಿ ಭಗವತಿ ದೇವಸ್ಥಾನದ ಪರವಾಗಿ ಶ್ರೀ ಕುಮಾರ್ ಸ್ವಾಮಿಯವರು ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಹಾಗೂ ಬ್ಯಾಂಕಿನ ನಿರ್ದೇಶಕರುಗಳಿಗೆ ಶಾಲು ಹೊದಿಸಿ, ಫಲ-ಪುಷ್ಪ ಮತ್ತು ಪ್ರಸಾದ ನೀಡಿ ಗೌರವಿಸಿದರು.


​ಭಜನಾ ಸಂಕೀರ್ತನೆಯಲ್ಲಿ ಸಾಂತಾಕ್ರೂಜ್ ಪರಿಸರದ ಸಂಘಟಕರುಗಳಾದ ಉಮೇಶ್ ಕಾಪು, ದಿನೇಶ್ ಅಮೀನ್, ಸುಭಾಷ್ ಮಾಬ್ಯಾನ್, ಸುರೇಶ್ ಸುವರ್ಣ, ಶ್ರೀಮತಿ ಪ್ರೇಮ ಕೋಟ್ಯಾನ್, ಶ್ರೀಮತಿ ಸುಮಾ ಹಾಗೂ ಜಯ ಸಿ. ಸುವರ್ಣ ಅವರ ಅಭಿಮಾನಿಗಳು ಮತ್ತು ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಶ್ರೀ ನಾರಾಯಣ ಗುರು ಭಜನಾ ಮಂಡಳಿಯ ಪರವಾಗಿ ಶ್ರೀ ಕುಮಾರ್ ಸ್ವಾಮಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು.
​ಮಹಾ ಆರತಿಯ ನಂತರ ಭಕ್ತಾದಿಗಳೆಲ್ಲರಿಗೂ ಅನ್ನಪ್ರಸಾದ ವಿತರಣೆ ಮಾಡಲಾಯಿತು.



Related posts

ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?

Mumbai News Desk

ಮುಂಬೈ ಮುಂದುವರಿದ ಮಳೆ : ಇಂದು ರೆಡ್ ಅಲರ್ಟ್ ಘೋಷಣೆ; ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ಖಾಸಗಿ ಕಚೇರಿಗಳಿಗೆ ರಜೆ, ಹಲವಾರು ವಿಮಾನಗಳು ವಿಳಂಬ, ಸ್ಥಳೀಯ ರೈಲು ಸೇವೆಗಳು ವ್ಯತ್ಯಯ

Mumbai News Desk

ಭಾಂಡೂಪ್ ಶ್ರೀ ಶನೀಶ್ವರ ಭಕ್ತವೃಂದ ಮಿತ್ರ ಮಂಡಳಿಯ ವತಿಯಿಂದ ನಾಗೇಶ್ ಸುವರ್ಣ ಅವರಿಗೆ ಸನ್ಮಾನ

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಿಂದ ಆಟಿಡೊಂಜಿ – ಬಂಟ ಕೂಟ ಮತ್ತು ಡಾ| ಆರ್ ಕೆ ಶೆಟ್ಟಿ ಪ್ರಾಯೋಜಿತ “ಸಂಜೀವಿನಿ” ಲೋಕಾರ್ಪಣೆ.

Mumbai News Desk

ಮೈಸೂರು ಅಸೋಸಿಯೇಷನ್ ಮುಂಬೈ: ಶತಮಾನೋತ್ಸವದ ಸಮಾರೋಪ – ಕನ್ನಡ ಸಂಸ್ಕೃತಿಯೊಂದಿಗೆ ಮಹಾರಾಷ್ಟ್ರದ ಒಡನಾಟ

Mumbai News Desk

ಮುಂಬಯಿ ನ್ಯೂಸ್ ವೀಕ್ಷಕರ / ಓದುಗರ ಮನೆ, ಮನೆ ಗಣಪತಿ

Mumbai News Desk