July 22, 2026
Mumbai News Kannada
ತುಳುನಾಡು

ಮೂಲ್ಕಿ: ಕಾರ್ನಾಡು ಸಿ.ಎಸ್.ಐ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ







ಲಯನ್ಸ್ ಕ್ಲಬ್ ಮೂಲ್ಕಿ, ಸಿ.ಎಸ್.ಐ ಆಂಗ್ಪಮಾಧ್ಯಮ ಶಾಲೆ ಮತ್ತು ಕರ್ನಾಟಕ ಅರಣ್ಯ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ ಕಾರ್ನಾಡು ಸಿ.ಎಸ್.ಐ ಆಂಗ್ಪ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಮೂಲ್ಕಿಯ ಯುವ ವಕೀಲೆ ಕು. ಸಮೀಕ್ಷಾ ಭಾಸ್ಕರ ಹೆಗ್ಡೆಯವರು ಸಸಿಯನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ‘ಪ್ರಕೃತಿಯನ್ನು ನಾವು ಉಳಿಸಿದರೆ ನಾವು ಉಳಿದೇವು. ಈಗಿನ ತಾಪಮಾನ ಏರಿಕೆ, ಹವಾಮಾನ ವೈಪರಿತ್ಯಕ್ಕೆ ಮನುಷ್ಯನ ಅತಿ ಅಸೆಯೇಕಾರಣವಾಗಿದೆ. ಕೈಗಾರಿಕೆಗಳ ಸಂಖ್ಯೆ ಜಾಸ್ತಿಯಾಗುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ರೋಗಗಳು ಬರುವ ಸಾಧ್ಯತೆ ಇದೆ. ಹಾಗಾಗಿ ಗಿಡಗಳನ್ನು ನೆಟ್ಟು ಶುದ್ಧ, ಆರೋಗ್ಯಪೂರ್ಣ ಪರಿಸರಕ್ಕಾಗಿ ನಾವು ಪ್ರಯತ್ನಿಸೋಣ ಎಂದರು’.

ದೇವರು ನೀಡಿದ ಸುಂದರ ಪ್ರಕೃತಿಯನ್ನು ಉಳಿಸಿ ಬೆಳೆಸೋಣ ಎಂದು ಮೂಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರ್ಷರಾಯ್ ಶೆಟ್ಟಿ ಜಿ.ಎಂ. ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷರಾದ ರೆ| ಫಾ| ವಿಲಿಯಮ್ ಕುಂದರ್ ವಹಿಸಿದ್ದರು. ಸದಾಶಿವ ಹೊಸದುರ್ಗ, ಸ್ಯಾಮ್ ಮಾಬೆನ್ ಮುಖ್ಯ ಅತಿಥಿಗಳಾಗಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿ ಸುಹಾಸಿನಿ ಸ್ವಾಗತಿಸಿದರು. ಶಾಲಾ ಸಂಚಾಲಕರಾದ ರಂಜನ್ ಜತ್ತನ್ನ ವೇದಿಕೆಯಲ್ಲಿದ್ದರು. ರೇಷ್ಮಾ ಮತ್ತು ಧನ್ಯ ಕಾರ್ಯಕ್ರಮ ನಿರ್ವಹಿಸಿದರು. ಆಶಾ ಧನ್ಯವಾದವಿತ್ತರು.



Related posts

ಅಕ್ಷತಾ ಪೂಜಾರಿ ಮನೆಗೆ ನುಗ್ಗಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

Mumbai News Desk

ಪಡುಬಿದ್ರಿ : ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿ ನಿಧಿ ವಿತರಣೆ, ಉಪನ್ಯಾಸ

Mumbai News Desk

ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ : ಯಶ್ಪಾಲ್ ಸುವರ್ಣ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು

Mumbai News Desk