27.1 C
Mumbai
July 23, 2026
Mumbai News Kannada
ತುಳುನಾಡು

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು







ಬೆಳ್ತಂಗಡಿ, ಜೂ. 8 : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಅನಿತಾ ಕಾಸರಗೋಡು ಎಂಬ ಖಾತೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಪೂಜಾರಿಗಳು ಮತ್ತು ಶೆಟ್ಟಿಗಳು ಎಂಬ ಜಾತಿಯ ಹೆಸರಿನ ಪದಗಳನ್ನು ಬಳಸಿ” ಅಶ್ಲೀಲವಾಗಿ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅನಿತಾ ಕಾಸರಗೋಡು ವಿರುದ್ಧ ಕಾನೂನಾತ್ಮಕವಾದ ಕ್ರಮವನ್ನು ಕೈಗೊಳ್ಳಬೇಕು, ಇಲ್ಲದೇ ಇದ್ದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಹೋರಾಟವನ್ನು ನಡೆಸಲಾಗುವುದು ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪುರವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



Related posts

ಮುಲ್ಕಿ ಅರಸು ಪ್ರಶಸ್ತಿ 2025 ಪ್ರಧಾನ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭ: ಪತ್ರಕರ್ತ ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ.

Mumbai News Desk

ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ: ಕಾರ್ಮಿಕರು ಶ್ರಮ ಮತ್ತು ಪರೋಪಕಾರಿ ಜೀವನದ ನಿಜವಾದ ಸಾಧಕರು – ಡಾ.ಹರಿಕೃಷ್ಣ ಪುನರೂರು

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವದ ನಾಲ್ಕನೇ ದಿನದ ಸಮಾರಂಭ;

Mumbai News Desk

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk