31 C
Mumbai
September 11, 2026
Mumbai News Kannada
ತುಳುನಾಡು

ಬಿಲ್ಲವ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲಿ : ಪ್ರವೀಣ್‌ ಪೂಜಾರಿ ಆಗ್ರಹ.





ಮೂಡಿಗೆರೆ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ
ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಗುರಿಯಾಗಿಸಿಕೊಂಡು, ಅನಿತಾ ಕಾಸರಗೋಡು ಎಂಬ ಮಹಿಳೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಹರಿಬಿಡುತ್ತಿರುವುದು ತೀವ್ರ ಖಂಡನೀಯ ಎಂದು ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್‌ ಪೂಜಾರಿ ತಿಳಿಸಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯತೆಯ ತತ್ವಾದರ್ಶಗಳನ್ನು ಅನುಸರಿಸಿಕೊಂಡು ಬಂದಿರುವ ಬಿಲ್ಲವ ಸಮುದಾಯದ ಬಗ್ಗೆ ಕೀಳುಮಟ್ಟದ ಪದಗಳನ್ನು ಬಳಸಿ ಸಮಾಜದ ಘನತೆಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿರುವುದು ಸಮುದಾಯದ ಭಾವನೆಗಳಿಗೆ ಗಂಭೀರ ನೋವುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಪೊಲೀಸ್‌ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಅವಕಾಶವಿದ್ದರೂ, ಈವರೆಗೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದು ಬಿಲ್ಲವ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಬೇಸರಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಸಮಾಜಗಳ ನಡುವೆ ದ್ವೇಷ ಮತ್ತು ವೈಮನಸ್ಸು ಸೃಷ್ಟಿಸುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಒಂದು ವೇಳೆ ನ್ಯಾಯಸಮ್ಮತ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಮುಂದುವರಿದರೆ, ರಾಜ್ಯದಾದ್ಯಂತ ಬಿಲ್ಲವ ಸಂಘ-ಸಂಸ್ಥೆಗಳು ಹಾಗೂ ಸಮಾಜದ ಮುಖಂಡರು ಒಗ್ಗಟ್ಟಾಗಿ ಪ್ರಜಾಸತ್ತಾತ್ಮಕ ಹಾಗೂ ಕಾನೂನುಬದ್ಧ ಹೋರಾಟದ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ಮುಂದಾಗಲಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್‌ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.



Related posts

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಮೂಲ್ಕಿ : ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ

Mumbai News Desk

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

“ಉಡುಪಿ ಆಂಥೆಮ್” ಉಡುಪಿ ಬಗ್ಗೆ ಸುಂದರ ಗೀತೆಯ ವಿಡಿಯೋ ಬಿಡುಗಡೆ

Mumbai News Desk

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ

Mumbai News Desk

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು

Mumbai News Desk