September 6, 2026
Mumbai News Kannada
ಕ್ರೀಡೆ

ಮಲಾಡ್ ಕನ್ನಡ ಸಂಘ ಒಳಾಂಗಣ ಕ್ರೀಡೆ ಸ್ಪರ್ಧೆ.





ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ : ಅಡ್ವೊಕೇಟ್ ಜಗದೀಶ್ ಎಸ್ ಹೆಗ್ಡೆ

ಚಿತ್ರ, ವರದಿ: ರಮೇಶ್ ಉದ್ಯಾವರ.

ಮಲಾಡ್, ಡಿ. 13:  ಯುವಕರಲ್ಲಿ ಸಂಘದ ಕಾರ್ಯಚಟುವಟಿಕೆಯ ಜೊತೆಗೆ ಕ್ರೀಡಾಸಕ್ತಿ ಬೆಳೆಯ ಬೇಕೆಂಬ ಉದ್ದೇಶದಿಂದ ಮಲಾಡ್ ಕನ್ನಡ ಸಂಘವು ಪ್ರತಿವರ್ಷ ಸಂಘದ ಸದಸ್ಯರ ಮಕ್ಕಳಿಗೆ ಮತ್ತು ಯುವಕರಿಗೆ ಒಳಾಂಗಣ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ.  ಕ್ರೀಡೆ ಮನಸ್ಸನ್ನು ಕ್ರಿಯಾಶೀಲಗೊಳಿಸುವ ಮೂಲಕ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತದೆ ಜೊತೆಗೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸ್ಫೂರ್ತಿಯಾಗಿದೆ ಎಂದು ಮಲಾಡ್ ಕನ್ನಡ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಜಗದೀಶ್ ಎಸ್ ಹೆಗ್ಡೆ ಅಭಿಪ್ರಾಯಪಟ್ಟರು.

     ಡಿ. 1೦ರಂದು ಮಲಾಡ್ ಮಾರ್ವೆ ರೋಡ್ ನ ಯುನಿಟಿ ಅಪಾರ್ಟ್ಮೆಂಟ್ ನ ಸಂಘದ ಕಚೇರಿಯ ರಮಾನಾಥ ಎಸ್ ಪಯ್ಯಾಡೆ ಸ್ಮಾರಕ ಸಭಾಂಗಣದಲ್ಲಿ ಸಂಘವು ಆಯೋಜಿಸಿದ ಒಳಾಂಗಣ ಕ್ರೀಡಾ ಸ್ಫರ್ಧಾ ವಿಜೇತರ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸ್ಪರ್ಧಾತ್ಮಕ ಬದುಕಿನಲ್ಲಿ ಕ್ರೀಡೆ ಅನಿವಾರ್ಯವಾಗಿದ್ದು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸಲಿದೆ.  ಇಂದಿನ ಕಾರ್ಯಕ್ರಮದಲ್ಲಿ ಬಹುಸಂಖ್ಯೆಯಲ್ಲಿ ಯುವ ಸದಸ್ಯರು, ಮಕ್ಕಳು ನೀಡಿದ ಬೆಂಬಲ ಸಂಘದ ಭವಿಷ್ಯದ ಕಾರ್ಯ ಚಟುವಟಿಗಳಿಗೆ ಪ್ರೋತ್ಸಾಹ ದೊರಕಿದಂತಾಗಿದೆ ಎಂದು ಹೇಳಿ ಕ್ರೀಡೆಯಲ್ಲಿ ಗೆದ್ದು ಬಹುಮಾನ ಪಡೆದ ಸ್ಪರ್ಧಿಗಳನ್ನು ಅಭಿನಂದಿಸಿದರು.         ಕಾರ್ಯಕ್ರಮನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತನಾಡಿದ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಆಶಾಲತಾ ಎಸ್ ಕೋಟ್ಯಾನ್ ಸಂಘದಲ್ಲಿ ಯುವಶಕ್ತಿಯನ್ನು ಪ್ರೋತ್ಸಾಹಿಸಿ ಕ್ರೀಡಾ ಆಯೋಜನೆ ಮೂಲಕ ಅವರನ್ನು ಧನಾತ್ಮಕವಾಗಿ ಸಂಘದ ಕಾರ್ಯಚಟುವಟಿಕೆಗಳಲ್ಲಿ ಬಳಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು ಇಂದಿನ ಕಾರ್ಯಕ್ರಮಕ್ಕೆ ಮಕ್ಕಳ ಪಾಲಕರಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ್ದಾರೆ.  

     ಬೆಳಿಗ್ಗೆ 10ಗಂಟೆಯಿಂದ ಪ್ರಾರಂಭಗೊಂಡ ಒಳಾಂಗಣ ಸ್ಪರ್ಧೆಯಲ್ಲಿ ವಯೋಮಿತಿಯ ಅನುಗುಣವಾಗಿ ಯುವಕ ಯುವತಿಯರು,   ಮಕ್ಕಳಿಗೆ ಮತ್ತು ಹಿರಿಯರಿಗೆ ಕೇರಂ, ಚೆಸ್ ಮತ್ತು ತುಳುನಾಡಿನ ಪಾರಂಪರಿಕ ಕ್ರೀಡೆ ಚೆನ್ನದ ಮಣೆ ಪಂದ್ಯವನ್ನು ಆಯೋಜಿಸಲಾಗಿತ್ತು. 

      ಸಮರೋಪ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳಿಂದ ಗೆದ್ದವರಿಗೆ ಫಲಕ ಮತ್ತು ಮಾನಪತ್ರ ಪ್ರಥಮ ಮತ್ತು ದ್ವಿತೀಯ ಬಹುಮಾನ ನೀಡಿ ಗೌರವಿಸಲಾಯಿತು.  ಕಾರ್ಯಕ್ರಮದಲ್ಲಿ ಜತೆ ಕಾರ್ಯದರ್ಶಿ ಜಯಪ್ರಕಾಶ್ ಸಾಲ್ಯಾನ್ ಕಾರ್ಯಕ್ರಮ ವಿಭಾಗದ ಕಾರ್ಯಾಧ್ಯಕ್ಷ ಸೂರಪ್ಪ ಕುಂದರ್ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲಲಿತ ವಿ ಭಂಡಾರಿ ಉಪಕಾರ್ಯಾಧ್ಯಕ್ಷೆ ಸಾರಿಕಾ ಆರ್ ಶೆಟ್ಟಿ, ಜತೆ ಕಾರ್ಯದರ್ಶಿ ಶಾರದಾ ಪೂಜಾರಿ, ಕೋಶಾಧಿಕಾರಿ ವಿಜಯಾ ಎಸ್ ಪೂಜಾರಿ ಯುವ ವಿಭಾಗದ ಕಾರ್ಯಾಧ್ಯಕ್ಷ ರಾಕೇಶ್ ಜಿ ಪೂಜಾರಿ ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಯುವ ವಿಭಾಗದ ಸದಸ್ಯರು ಉಪಸ್ಥಿತರಿದ್ದರು.



Related posts

ಯುವಶಕ್ತಿ ಸಂಘಟನೆಯಿಂದ ಸಮಾಜದ ಏಳಿಗೆ ಸಾಧ್ಯ: ಡೊಂಬಿವಲಿಯಲ್ಲಿ ‘KYD’ (ಕರುನಾಡ ಯೂತ್–ಡೊಂಬಿವಲಿ) ಕ್ರೀಡಾಕೂಟ ಯಶಸ್ವಿ

Mumbai News Desk

ವರ್ಲ್ಡ್ ಮಾಸ್ಟರ್ಸ್ ಸ್ಪೋರ್ಟ್ಸ್ ಚಾಂಪಿಯನ್‌ಪ್; ಶುಭಾ ಗುಜರನ್ ಇವರಿಗೆ ಎರಡು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ

Mumbai News Desk

ರಾಜಸ್ತಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಐತಿಹಾಸಿಕ ಐಪಿಎಲ್ ದಾಖಲೆ: ಲಕ್ನೋ ವಿರುದ್ಧ ರಾಜಸ್ತಾನಕ್ಕೆ ಭರ್ಜರಿ ಜಯ

Mumbai News Desk

ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟ,

Mumbai News Desk

ಕರ್ನಾಟಕ ಸಂಘ ಪನ್ವೆಲ್ ನ 32ನೇ ವರುಷದ ವಾರ್ಷಿಕ ಕ್ರೀಡಾ ಕೂಟ.

Mumbai News Desk

Jai Hind Sports Club Hosts 59th R. N. Utchil Memorial Athletics Meet

Mumbai News Desk