28 C
Mumbai
September 19, 2026
Mumbai News Kannada
ತುಳುನಾಡು

ಯುವವಾಹಿನಿ ಮೂಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ





ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಭವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶ್ರೀ ಬಪ್ಪನಾಡು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಅಂಚನ್ ಬಾಳೆಹಿತ್ಲು ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವವಾಹಿನಿಯು ಯುವ ಸಮಾಜವನ್ನು ಕಟ್ಟಿ ಬೆಳೆಸುವ ಮೂಲಕ ಸಮಾಜದ ಬಹುದೊಡ್ಡ ಆಸ್ತಿಯಾಗಿ ಹೊರಹೊಮ್ಮಿದೆ; ಮುಂಬರುವ ದಿನಗಳಲ್ಲಿಯೂ ಅದು ಯುವ ಸಮುದಾಯದ ಬಲಿಷ್ಠ ಧ್ವನಿಯಾಗಿ ಬೆಳೆಯಬೇಕು ಎಂದು ಆಶಿಸಿದರು.


ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್‌ ಕುಮಾರ್ ಪಡ್ಡು ಅವರು, ಯುವವಾಹಿನಿಯ ತತ್ವ ಮತ್ತು ಆದರ್ಶಗಳು ಯುವ ಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಜೊತೆಗೆ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲು ಪ್ರೇರೇಪಿಸುತ್ತವೆ ಎಂದರು. ಇದೇ ವೇಳೆ ಸಂಸ್ಥೆಯ 24ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಚರಿಷ್ಮಾ ಶ್ರೀನಿವಾಸ್‌ ಮತ್ತು ಅವರ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷರಾದ ವಿನಯ ಕುಮಾರ್ ಮಟ್ಟು ಅವರು ವಹಿಸಿದ್ದರು. ವೇದಿಕೆಯಲ್ಲಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ಸೀತಾ ಗೋಪಾಲ್ ಕೋಟ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರಾ ಮೂಡಬಿದ್ರಿ, ಮೂಲ್ಕಿ ಘಟಕದ ಕಾರ್ಯದರ್ಶಿ ಪ್ರೇರಣಾ ಡಿ, ಕೋಶಾಧಿಕಾರಿ ಪ್ರಥ್ವಿಕ್ ಡಿ. ಕೋಟ್ಯಾನ್ ಹಾಗೂ ನಿಯೋಜಿತ ಕಾರ್ಯದರ್ಶಿ ವೇದಾ ಜಯಕುಮಾರ್ ಕುಬೆವೂರು ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು.
ಇದೇ ಸುದಿನದಂದು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಗೌರವಿಸಿ, ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಸತೀಶ್‌ ಕಿಲ್ಪಾಡಿ ಅವರು ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.



Related posts

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 

Mumbai News Desk

ಹೆಜಮಾಡಿ ಬೈಪಾಸ್ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆ: 15 ದಿನಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹಾಗೂ ಅನಿರ್ದಿಷ್ಟಾವಧಿಯ ಹೋರಾಟ: ವಿನಯ್ ಕುಮಾರ್ ಸೊರಕೆ ಎಚ್ಚರಿಕೆ

Mumbai News Desk

ಗ್ರಾಮದ ಅಭಿವೃದ್ಧಿ ನಮ್ಮಧ್ಯೇಯವಾಗಲಿ : ಕುಸುಮಾ ಚಂದ್ರಶೇಖರ್

Mumbai News Desk

ಮುಲ್ಕಿ ಅರಸು ಪ್ರಶಸ್ತಿ 2025 ಪ್ರಧಾನ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭ: ಪತ್ರಕರ್ತ ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ.

Mumbai News Desk

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ

Mumbai News Desk