September 17, 2026
Mumbai News Kannada
Uncategorizedಕರಾವಳಿ

ವಿಶ್ವಶಾಂತಿಗಾಗಿ ರಾಮಾಂಜಿ ಮೌನ ಪ್ರತಿಭಟನೆ





ಜಾಗತಿಕ ಯುದ್ಧದ ಮೂಲಕ ಜನಾಂಗದ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ಪ್ರಕೃತಿಯ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಕರ್ಮಿ, ಕನ್ನಡ ಉಪನ್ಯಾಸಕ ರಾಮಾಂಜಿ ನಮ್ಮ ಭೂಮಿ ಶನಿವಾರ ಮಣಿಪಾಲ ಟೈಗರ್ ಸರ್ಕಲ್ ಬಳಿ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ಮಣಿಪಾಲದ ಬ್ರಹ್ಮ ಡಾ. ಟಿ.ಎಂ.ಎ.ಪೈ ಅವರ ಪುತ್ತಳಿಗೆ ಪುಷ್ಪ ನಮನ ಅರ್ಪಿಸಿ, ಈ ಯುದ್ಧ ನೀತಿಗಳಿಂದ ಮಡಿದವರಿಗೆ ಗೌರವ ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ರಾಮಾಂಜಿ, ಕಳೆದ ಐದು ತಿಂಗಳಿನಿಂದ ನಡೆಯುತ್ತಿರುವ ಜಾಗತಿಕ ಯುದ್ಧ ಸಂಬಂಧಿ ಘಟನೆಗಳನ್ನು ನೋಡಿ ಮನನೊಂದು ನೈತಿಕ ಪ್ರತಿಭಟನೆ ಮಾಡುತ್ತಿದ್ದೇನೆ. ಈ ಕುರಿತು ಈಗಾಗಲೇ ಉಡುಪಿ, ಕುಂದಾಪುರ, ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ ನಾಲ್ಕನೇ ಬಾರಿಗೆ ಪ್ರತಿಭಟನಾ ಚಳುವಳಿ ನಡೆಸುತ್ತಿದ್ದೇನೆ. ಜಾಗತಿಕ ಮಟ್ಟದ ಸಹಬಾಳ್ವೆ, ಶಾಂತಿ, ಸೌಹಾರ್ದತೆ, ಪರಸ್ಪರ ಹೊಂದಾಣಿಕೆ, ಮಾನವ ಪ್ರೀತಿ, ಪರಿಸರ ಕಾಳಜಿ, ನಮ್ಮ ಮಕ್ಕಳ ಭವಿಷ್ಯಕ್ಕೆ ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದರು.


ಸ್ಥಳಕ್ಕೆ ಆಗಮಿಸಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಯುದ್ಧಗಳು ಮಾನವ ಸಮಾಜ ಹಾಗೂ ಪರಿಸರಕ್ಕೆ ಮಾರಕವಾಗಿವೆ. ಇದರ ಅಪಾಯಗಳನ್ನು ನಾವೆಲ್ಲರೂ ಅರಿಯಬೇಕು. ಪ್ರಪಂಚದ ಒಳಿತಿಗಾಗಿ ರಾಮಾಂಜಿಯವರು ನಡೆಸುತ್ತಿರುವ ಈ ಧರಣಿಯನ್ನು ಸಾರ್ವಜನಿಕರಾದ ನಾವೆಲ್ಲರೂ ಬೆಂಬಲಿಸಬೇಕು. ಜಾಗತಿಕ ಯುದ್ಧದ ವಿರುದ್ಧ ಧ್ವನಿ ಎತ್ತಿ ಏಕಾಂಗಿಯಾಗಿ ಧರಣಿ ಕುಳಿತ ಮೊದಲ ವ್ಯಕ್ತಿ ಇವರು. ನಮ್ಮ ಸಮಾಜದ ಒಬ್ಬ ಮಾದರಿ ವ್ಯಕ್ತಿಯಾಗಿ ಅವರು ಕೈಗೊಂಡ ಈ ಕಾರ್ಯ ಜನಾಂದೋಲನವಾಗಿ ರೂಪಗೊಳ್ಳಲಿ ಎಂದು ತಿಳಿಸಿದರು.


ಈ ಪ್ರತಿಭಟನೆಗೆ ಹಲವು ಮಂದಿ ಬೆಂಬಲ ಸೂಚಿಸಿದ್ದು, ಸ್ಥಳಕ್ಕೆ ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್, ರಂಗಕರ್ಮಿ ರವಿರಾಜ್ ಎಚ್.ಪಿ., ಕಲಾವಿದ ಭಾಸ್ಕರ ಮಣಿಪಾಲ, ಕವಿ ಅಂಶುಮಾಲಿ, ಸಾಮಾಜಿಕ ಕಾರ್ಯಕರ್ತರಾದ ಸುಂದರ್ ಮಣಿಪಾಲ, ರಾಘವೇಂದ್ರ ಪ್ರಭು ಕರ್ವಾಲು ಮೊದಲಾದವರು ಆಗಮಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.



Related posts

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.

Mumbai News Desk

ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ,* ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ

Mumbai News Desk

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, ಏಪ್ರಿಲ್ 19ರಿಂದ ಜೂನ್ 1ರ ತನಕ ಏಳು ಹಂತಗಳಲ್ಲಿ ಚುನಾವಣೆ.

Mumbai News Desk

ಬಿಲ್ಲವರ ಅಸೋಸಿಯೇಷನ್, ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಮಹಿಳಾ ವಿಭಾಗದ ವತಿಯಿಂದ ಹರಶಿನ ಕುಂಕುಮ ಕಾರ್ಯಕ್ರಮ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ   ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ

Mumbai News Desk

ಶ್ರೀ ಮಣಿಕಂಠನ ಸನ್ನಿಧಾನಕ್ಕೆ ಉಪೇಂದ್ರ ಸ್ವಾಮಿಯರ 24ನೇ ವರ್ಷದ ಪಾದಯಾತ್ರೆ.

Mumbai News Desk