August 4, 2026
Mumbai News Kannada
ಪ್ರಕಟಣೆ

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ: ಜೂನ್ 21ರಂದು ಯೋಗ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ






​ಮುಂಬೈ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ ಇದರ ವತಿಯಿಂದ ಜೂನ್ 21ರ ಆದಿತ್ಯವಾರದಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಉಚಿತ ಯೋಗ ಹಾಗೂ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ.
​ಮೀರಾ ರೋಡ್‌ನ ಕಾಶಿಗಾಂವ್, ಸಾಯಿ ಕೃಪಾ ಕಾಂಪ್ಲೆಕ್ಸ್, 16A ಹಿಲ್ ವ್ಯೂ ಸೊಸೈಟಿಯಲ್ಲಿರುವ ಸಂಘದ ‘ಪ್ರಿಯಾ ವಿಶ್ವಕರ್ಮ ಸಭಾ ಭವನ’ದಲ್ಲಿ ಅಸೋಸಿಯೇಷನ್‌ನ ಅಧ್ಯಕ್ಷರಾದ ರವೀಶ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಲಿದೆ.
​ಕಾರ್ಯಕ್ರಮದ ವಿವರಗಳು:
​ಉಚಿತ ಯೋಗ ಶಿಬಿರ:
ಬೆಳಗ್ಗೆ 8.30ರಿಂದ 10.30ರ ವರೆಗೆ ನಡೆಯಲಿದ್ದು, ಅಂಬಿಕಾ ಯೋಗಾಶ್ರಮದ 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಯೋಗ ಶಿಕ್ಷಕರಾದ ಶ್ರೀ ಸಂದೀಪ್ ಕದಂ ಅವರು ಶಿಬಿರವನ್ನು ನಡೆಸಿ ಕೊಡಲಿದ್ದಾರೆ.
​ಉಚಿತ ಆರೋಗ್ಯ ತಪಾಸಣಾ ಶಿಬಿರ:
ಮೀರಾ ರೋಡ್‌ನ ವೋಕಹಾರ್ಡ್ ಆಸ್ಪತ್ರೆಯ (Wockhardt Hospital) ಸಹಯೋಗದೊಂದಿಗೆ ಬೆಳಗ್ಗೆ 11.00ರಿಂದ ಅಪರಾಹ್ನ 3.00ರ ವರೆಗೆ ಜರಗಲಿದೆ. ಈ ಶಿಬಿರದಲ್ಲಿ ಮುಲುಂಡ್‌ನ ಡಾ. ಅಖಿಲ್ ಮೋಹನ್ ಕೊಡವೂರು ಹಾಗೂ ಮಲಾಡ್ ಪೂರ್ವದ ಆಚಾರ್ಯ ಡೆಂಟಲ್ ಕ್ಲಿನಿಕ್‌ನ ಡಾ. ಶಶಿನ್ ಕುಮಾರೇಶ್ ಆಚಾರ್ಯ ಅವರು ಪಾಲ್ಗೊಳ್ಳಲಿದ್ದಾರೆ.
​ವಿಶ್ವಕರ್ಮ ಸಮಾಜ ಬಾಂಧವರು ಹಾಗೂ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಮುಂಬೈ ಪ್ರಕಟಣೆಯಲ್ಲಿ ವಿನಂತಿಸಿದೆ.



Related posts

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk

ವಿದ್ಯಾವಿಹಾರ್ ಪಶ್ಚಿಮದ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜುಲೈ 11ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ಮದರ್ ಇಂಡಿಯಾದ 19th east ಬಾಂಬೆ ಸ್ಕೌಟ್ ಮಿತ್ರರ ಮತ್ತು ಮದರ್ ಇಂಡಿಯಾ ಹಳೆ ವಿದ್ಯಾರ್ಥಿ ಫೌಂಡೇಶನ್ ನ ಜಂಟಿ ಆಶ್ರಯದಲ್ಲಿ ನವೆಂಬರ್ 15 ಮತ್ತು 16 ರಂದು ಫಾರ್ಮ್ ರಿಜೆನ್ಸಿಯಲ್ಲಿ 6 ನೇ ವರ್ಷದ ಗುರುವಂದನಾ ಕಾರ್ಯಕ್ರಮ.

Mumbai News Desk

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾ-ಭಾಯಂದರ್: ಜು.29: ಗುರುಪೂರ್ಣಿಮೆ ಆಚರಣೆ

Mumbai News Desk

ಅ.10 ; ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ ತಾಳಮದ್ದಳೆ, ಸನ್ಮಾನ.

Mumbai News Desk