28.7 C
Mumbai
June 30, 2026
Mumbai News Kannada
ತುಳುನಾಡು

ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ : ಅಧ್ಯಕ್ಷರಾಗಿ ಸುನೀಲ್ ಆಳ್ವ ಆಯ್ಕೆ





ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 51ನೇ ವರ್ಷದ ಅಧ್ಯಕ್ಷರಾಗಿ ಸುನಿಲ್ ಆಳ್ವ ಅವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಜಯಾನಂದ್ ರಾವ್, ಖಜಾಂಚಿಯಾಗಿ ರಾಘವೇಂದ್ರ ಭಟ್, ಗೌರವಾಧ್ಯಕ್ಷರಾಗಿ ಯದುನಾರಾಯಣ ಶೆಟ್ಟಿ ಹಾಗೂ ಕಾರ್ಯಾಧ್ಯಕ್ಷರಾಗಿ ಚಂದ್ರಶೇಖರ್ ಸುವರ್ಣ ಅವರು ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಬಪ್ಪನಾಡು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಕಿಶೋರ್ ಶೆಟ್ಟಿ ಬಪ್ಪನಾಡು, ಮುಲ್ಕಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ಷಗುತ್ತು, ಉದಯ ಕುಮಾರ್ ಶೆಟ್ಟಿ ಅಧಿಧನ್, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಶಿವಶಂಕರ್ ವರ್ಮ ಮುಂತಾದವರು ಅಭಿನಂದಿಸಿದ್ದಾರೆ.



Related posts

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್ ಉದ್ಘಾಟನೆ

Mumbai News Desk

Grand Thayankett Mahotsav, celebrated at Uppala Thurthi, Mahamalaraya Temple

Mumbai News Desk

ಕೆ ಎನ್ ಚಂದ್ರಶೇಖರ್ ಅವರ ಬೀಸು ಬಲೆಗೆ ಭಾರಿ ಗಾತ್ರದ ತೊರಕೆ ಮೀನು (STING RAY FISH)

Mumbai News Desk

ಮೂಲ್ಕಿ : ವಿಜಯಾ ರೈತರ ಸೇವಾ ಸಂಘದ ಮಹಾಸಭೆ ಸದಸ್ಯರಿಗೆ ಶೇ ೧೨ ಡಿವಿಡೆಂಡ್

Mumbai News Desk

ರೋಟರಿ ಕ್ಲಬ್ ಶಂಕರಪುರ ನೂತನ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಆಯ್ಕೆ ,

Mumbai News Desk

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರಭೋದ್ ಚಂದ್ರ ಹೆಜಮಾಡಿ ಆಯ್ಕೆ

Mumbai News Desk