July 1, 2026
Mumbai News Kannada
ತುಳುನಾಡು

ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ: ಕಾರ್ಮಿಕರು ಶ್ರಮ ಮತ್ತು ಪರೋಪಕಾರಿ ಜೀವನದ ನಿಜವಾದ ಸಾಧಕರು – ಡಾ.ಹರಿಕೃಷ್ಣ ಪುನರೂರು





ಮುಲ್ಕಿ,ಕಾರ್ಮಿಕರು ದೇಶದ ರಾಯಭಾರಿಗಳು ಆಗಿದ್ದು ಕಠಿಣ ಶ್ರಮ ಹಾಗೂ ಪರೋಪಕಾರಿ ಜೀವನದ ಮೂಲಕ ಸಾಧಕರಾಗಿದ್ದಾರೆ. ಇಂತಹ ತೆರೆಯ ಮರೆಯಲ್ಲಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯವನ್ನು ಪ್ರತೀ ತಿಂಗಳು ಸಾಲ್ಯಾನ್ ರವರು ಮಾಡುತ್ತಿರುವುದು ಅಭಿನಂದನೀಯ ಎಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಅವರು ಜೂ.30ರಂದು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ನ ಸಭಾಗ್ರಹದಲ್ಲಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅತಿಥಿ ತುಳು ವರ್ಲ್ಡ್ ಫೌಂಡೇಶನ್ ಇದರ ಅಧ್ಯಕ್ಷೆ ಭಾನುಮತಿ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿ ಮಹತ್ವದ ಕಾರ್ಯಕ್ರಮದ ಆಯೋಜನಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜುಲೈ ತಿಂಗಳ ಹೊಸ ಅಂಗಣ ಮಾಸಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು ಹಾಗೂ ಸ್ನೇಹ ಜೀವಿ, ಪರೋಪಕಾರಿ ಪೇಯಿಂಟರ್ ವೃತ್ತಿಯ ಗೇರುಕಟ್ಟೆ ಸಲ್ವಡೋ ಡಿ’ಸೋಜಾರವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಸುರೇಂದ್ರ ಜಿ.ಶೆಣೈ ಮುಲ್ಕಿ, ಯುವವಾಹಿನಿ ಘಟಕದ ಅಧ್ಯಕ್ಷೆ ಚರಿಶ್ಮ ಶ್ರೀನಿವಾಸ್, ಕಕ್ವ ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರ್ಷರಾಜ ಶೆಟ್ಟಿ, ಹಬೀಬುಲ್ಲ, ಸರೋಜಿನಿ ಸುವರ್ಣ, ಶಶಿ ಅಮೀನ್ ಗೇರುಕಟ್ಟೆ,ವಿಜಯ ಹರಿಶ್ಚಂದ್ರ ಸಾಲ್ಯಾನ್, ಸಾಧು ಅಂಚನ್ ಉಪಸ್ಥಿತರಿದ್ದರು.
ಹೊಸ ಅಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ . ಸಾಲ್ಯಾನ್ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು.ವಾಸು ಪೂಜಾರಿ ಚಿತ್ರಾಪು ವಂದಿಸಿದರು.ಕಾರ್ಯಕ್ರಮವನ್ನು ದಿನೇಶ್ ಕೋಲ್ನಾಡು ನಿರೂಪಿಸಿದರು.



Related posts

ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ‘ಭಾರತ್ ಬ್ಯಾಂಕ್’: ಬೆಳ್ತಂಗಡಿಯ ಸುಸಜ್ಜಿತ ಕಟ್ಟಡದಲ್ಲಿ ಶಾಖೆ ಕಾರ್ಯಾರಂಭ.

Mumbai News Desk

ಬಿಲ್ಲವ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಲಿ : ಪ್ರವೀಣ್‌ ಪೂಜಾರಿ ಆಗ್ರಹ.

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ‘ಮಾತೃ ವೈಭವ’ ಸಂಭ್ರಮ; ಭಕ್ತಿಪರವಶತೆಯ ಹೊರೆಕಾಣಿಕೆ ಸಮರ್ಪಣೆ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk