30 C
Mumbai
August 16, 2026
Mumbai News Kannada
ತುಳುನಾಡು

ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ: ಕಾರ್ಮಿಕರು ಶ್ರಮ ಮತ್ತು ಪರೋಪಕಾರಿ ಜೀವನದ ನಿಜವಾದ ಸಾಧಕರು – ಡಾ.ಹರಿಕೃಷ್ಣ ಪುನರೂರು





ಮುಲ್ಕಿ,ಕಾರ್ಮಿಕರು ದೇಶದ ರಾಯಭಾರಿಗಳು ಆಗಿದ್ದು ಕಠಿಣ ಶ್ರಮ ಹಾಗೂ ಪರೋಪಕಾರಿ ಜೀವನದ ಮೂಲಕ ಸಾಧಕರಾಗಿದ್ದಾರೆ. ಇಂತಹ ತೆರೆಯ ಮರೆಯಲ್ಲಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯವನ್ನು ಪ್ರತೀ ತಿಂಗಳು ಸಾಲ್ಯಾನ್ ರವರು ಮಾಡುತ್ತಿರುವುದು ಅಭಿನಂದನೀಯ ಎಂದು ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಅವರು ಜೂ.30ರಂದು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ನ ಸಭಾಗ್ರಹದಲ್ಲಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅತಿಥಿ ತುಳು ವರ್ಲ್ಡ್ ಫೌಂಡೇಶನ್ ಇದರ ಅಧ್ಯಕ್ಷೆ ಭಾನುಮತಿ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿ ಮಹತ್ವದ ಕಾರ್ಯಕ್ರಮದ ಆಯೋಜನಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜುಲೈ ತಿಂಗಳ ಹೊಸ ಅಂಗಣ ಮಾಸಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು ಹಾಗೂ ಸ್ನೇಹ ಜೀವಿ, ಪರೋಪಕಾರಿ ಪೇಯಿಂಟರ್ ವೃತ್ತಿಯ ಗೇರುಕಟ್ಟೆ ಸಲ್ವಡೋ ಡಿ’ಸೋಜಾರವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಸುರೇಂದ್ರ ಜಿ.ಶೆಣೈ ಮುಲ್ಕಿ, ಯುವವಾಹಿನಿ ಘಟಕದ ಅಧ್ಯಕ್ಷೆ ಚರಿಶ್ಮ ಶ್ರೀನಿವಾಸ್, ಕಕ್ವ ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರ್ಷರಾಜ ಶೆಟ್ಟಿ, ಹಬೀಬುಲ್ಲ, ಸರೋಜಿನಿ ಸುವರ್ಣ, ಶಶಿ ಅಮೀನ್ ಗೇರುಕಟ್ಟೆ,ವಿಜಯ ಹರಿಶ್ಚಂದ್ರ ಸಾಲ್ಯಾನ್, ಸಾಧು ಅಂಚನ್ ಉಪಸ್ಥಿತರಿದ್ದರು.
ಹೊಸ ಅಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ . ಸಾಲ್ಯಾನ್ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು.ವಾಸು ಪೂಜಾರಿ ಚಿತ್ರಾಪು ವಂದಿಸಿದರು.ಕಾರ್ಯಕ್ರಮವನ್ನು ದಿನೇಶ್ ಕೋಲ್ನಾಡು ನಿರೂಪಿಸಿದರು.



Related posts

ಬಿರುವೆರ್‌ ಕಾಪು ಸೇವಾ ಸಮಿತಿಯಿಂದ ಆಟಿ ಕಷಾಯ, ಮೆಂತೆ ಗಂಜಿ ವಿತರಣೆ

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk

ಕೋಡಿಕಲ್‌ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್‌ನ ಅಧ್ಯಕ್ಷರಾಗಿ ರವಿಪ್ರಸಾದ್ ಶೆಟ್ಟಿಗಾರ್ ಆಯ್ಕೆ

Mumbai News Desk

ಯುವವಾಹಿನಿ ಮೂಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Mumbai News Desk

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk